ಬೆಂಗಳೂರು: ಕಾಂತಾರ-2 ಸಿನಿಮಾದ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಕಾಯ್ದೆಯ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಭಾಗದಲ್ಲಿ ಜ.3 ರಿಂದ ಜ.25 ರವರೆಗೆ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಬದಲಾಗಿ ಕಾಂತಾರ-2 ಸಿನಿಮಾದವರು ಅರಣ್ಯ ಭೂಮಿಯಲ್ಲಿ ಶೂಟಿಂಗ್ ನಡೆಸಿಲ್ಲ. ಕಂದಾಯ ಜಮೀನಿನಲ್ಲಿ ಶೂಟಿಂಗ್ ಮಾಡಿದ್ದಾರೆ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಆದರೆ ಸಂಪೂರ್ಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂತಾರ-2 ಚಿತ್ರತಂಡ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ಸ್ಪೋಟಕ ಬಳಸಿ ವನ್ಯಜೀವಿ ಮತ್ತು ಸಸ್ಯ ಸಂಕುಲಕ್ಕೆ ಹಾನಿಯುಂಟು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆ ನಿರ್ದೇಶಕರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…