ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರಮೋದಿ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
Our people deserve the best possible infrastructure, which our Government will always work hard to provide. Our strides in infra creation have been widely lauded. https://t.co/3MStIKTnSF
— Narendra Modi (@narendramodi) February 11, 2023
ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ ಎಂದಿರುವ ಮುಖ್ಯಮಂತ್ರಿಗಳ ಟ್ವೀಟ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿ, ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದಿದ್ದಾರೆ.