ಮೈಸೂರು: ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ(ಜೂ.28) ರಾಜ್ಯದಿಂದ ಚುನಾಯಿತರಾದ ಸಂಸದರು ಹಾಗೂ ಕೇಂದ್ರ ಮಂತ್ರಿಗಳ ಜೊತೆ ರಾಜ್ಯದ ಅಭಿವೃದ್ಧಿಗಳ ಬಗ್ಗೆ ಚರ್ಚಿಸಿದ್ದರು. ಇದೀಗ ನಾಳೆ ಅಂದರೆ ಜೂ.29 ರಂದು ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ನಾಳೆ(ಜೂ.29) ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭೇಟಿಗೆ ಸಮಯ ನಿಗದಿಯಾಗಿದ್ದು, ಭೇಟಿ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಜೊತೆಗೆ ನೂತನ ಸರ್ಕಾರದ ಮೊದಲ ಬಜೆಟ್ನಲ್ಲಿ ರಾಜ್ಯಕ್ಕೆ ಏನೇನು ಕೇಳಬೇಕು ಅದನ್ನೆಲ್ಲಾ ಈಗಾಗಲೇ ಪ್ರಸ್ತಾವನೆ ಮೂಲಕ ಕಳುಹಿಸಿದ್ದು, ಮತ್ತೊಮ್ಮೆ ಪ್ರಸ್ತಾವನೆ ನೀಡಲಿದ್ದಾರೆ ಎನ್ನಲಾಗಿದೆ.
ಜೊತೆಗೆ ಮೇಕೆದಾಟು ಹಾಗೂ ಮಹದಾಯಿ ಅನುಮತಿಗೆ ಸಿದ್ದರಾಮಯ್ಯ ಮೋದಿಗೆ ಮನವಿ ಸಲ್ಲಿಸಲಿದ್ದು, ಇನ್ನೀತರ ರಾಜ್ಯ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…