ರಾಜ್ಯ

ಶೀಘ್ರವೇ ಪ್ರಧಾನಿ ಮೋದಿ, ಕೇಂದ್ರ ಸಚಿವರ ಭೇಟಿ: ವಕೀಲ ದೇವರಾಜೇಗೌಡ

ಹಾಸನ: ಕೇಂದ್ರದ ಅಧಿವೇಶನ ಮುಗಿದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಎಲ್ಲ ಕೇಂದ್ರ ಸಚಿವರನ್ನು ಕರೆದು ಜಿಲ್ಲೆಯಲ್ಲಿ ಬೃಹತ್‌ ಸಮಾವೇಶ ಮಾಡುತ್ತೇನೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು.

ಜೈಲಿನಿಂದ ಬಿಡುಗಡೆಯಾದ ಬಳಿಕ ಮಂಗಳವಾರ(ಜು.2) ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಕುಟುಂಬ ದ್ವೇಷಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಮಾನ ಹರಾಜಾಗಿದೆ. ಅಧಿಕಾರದ ಮದದಿಂದ ಮೆರೆಯುತ್ತಿರುವರಿಗೆ ಮುಂದೆ ತಕ್ಕ ಉತ್ತರ ಕೊಡುತ್ತೇನೆ. ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಒಂದು ಸ್ಥಾನವನ್ನು ಗೆಲ್ಲಬಾರದು ಎಂದು ಹೇಳಿದರು.

ಯಾವ ಜಿಲ್ಲೆಗೆ ಕಳಂಕ ತಂದರೋ, ಅದೇ ಜಿಲ್ಲೆಯಿಂದ ಸಂಘಟನೆ ಮಾಡುತ್ತಾನೆ. ಮಣ್ಣಿನ ಮಗ ದೇವೇಗೌಡರನ್ನ ಜಿಲ್ಲೆಗೆ ಕರೆದು ಸನ್ಮಾನ ಮಾಡುತ್ತೇನೆ. ಹೊಳೆನರಸೀಪುರ ಕ್ಷೇತ್ರದಲ್ಲಿ ಬೃಹತ್‌ ಕೈಗಾರಿಕೆ ಸ್ಥಾಪನೆಗೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ. ನಾನು ಹಾಗೂ ಪ್ರೀತಂಗೌಡ ಎಲ್ಲರೂ ಸೇರಿ ಒಂದಾಗಿ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಹೈಕಮಾಂಡ್‌ ಹೇಳಿದಂತೆ ಮಾಡುತ್ತೇವೆ. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಗೊಂದಲ ಬೇಡ. ಎರಡು ಪಕ್ಷದ ಕಾರ್ಯಕರ್ತರ ಜೊತೆ ನಾನು ಇರುತ್ತೇನೆ ಎಂದು ಹೇಳಿದರು.

ಬಿಜೆಪಿಯ ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ನನ್ನ ತುಂಬ ಹೃದಯದ ಧನ್ಯವಾದ ತಿಳಿಸುತ್ತೇನೆ. ಹಲವು ಕಾರಣಗಳಿಂದ ಈಗ ಏನು ಹೇಳಲ್ಲ. ಎಲ್ಲದಕ್ಕೂ ಸಮಯ ನಿಗದಿಯಾಗುತ್ತದೆ. ನನ್ನ ಬಂಧನ ಅನಿರೀಕ್ಷಿತ ಅಲ್ಲ, ನಿರೀಕ್ಷಿತ. 51 ದಿನಗಳ ಬಳಿಕ ಜೈಲಿನಿಂದ ಹೊರಗೆ ಬಂದಿದ್ದೇನೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ಜಿಲ್ಲೆಯ ಕಾರ್ಯಕರ್ತರು, ನಾಯಕರನ್ನು ಉಸಿರು ಇರುವವರೆಗೂ ಯಾರನ್ನು ಮರೆಯುದಿಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

5 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

5 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

6 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

6 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

6 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

7 hours ago