ರಾಜ್ಯ

ಶೀಘ್ರವೇ ಪ್ರಧಾನಿ ಮೋದಿ, ಕೇಂದ್ರ ಸಚಿವರ ಭೇಟಿ: ವಕೀಲ ದೇವರಾಜೇಗೌಡ

ಹಾಸನ: ಕೇಂದ್ರದ ಅಧಿವೇಶನ ಮುಗಿದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಎಲ್ಲ ಕೇಂದ್ರ ಸಚಿವರನ್ನು ಕರೆದು ಜಿಲ್ಲೆಯಲ್ಲಿ ಬೃಹತ್‌ ಸಮಾವೇಶ ಮಾಡುತ್ತೇನೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು.

ಜೈಲಿನಿಂದ ಬಿಡುಗಡೆಯಾದ ಬಳಿಕ ಮಂಗಳವಾರ(ಜು.2) ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಕುಟುಂಬ ದ್ವೇಷಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಮಾನ ಹರಾಜಾಗಿದೆ. ಅಧಿಕಾರದ ಮದದಿಂದ ಮೆರೆಯುತ್ತಿರುವರಿಗೆ ಮುಂದೆ ತಕ್ಕ ಉತ್ತರ ಕೊಡುತ್ತೇನೆ. ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಒಂದು ಸ್ಥಾನವನ್ನು ಗೆಲ್ಲಬಾರದು ಎಂದು ಹೇಳಿದರು.

ಯಾವ ಜಿಲ್ಲೆಗೆ ಕಳಂಕ ತಂದರೋ, ಅದೇ ಜಿಲ್ಲೆಯಿಂದ ಸಂಘಟನೆ ಮಾಡುತ್ತಾನೆ. ಮಣ್ಣಿನ ಮಗ ದೇವೇಗೌಡರನ್ನ ಜಿಲ್ಲೆಗೆ ಕರೆದು ಸನ್ಮಾನ ಮಾಡುತ್ತೇನೆ. ಹೊಳೆನರಸೀಪುರ ಕ್ಷೇತ್ರದಲ್ಲಿ ಬೃಹತ್‌ ಕೈಗಾರಿಕೆ ಸ್ಥಾಪನೆಗೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ. ನಾನು ಹಾಗೂ ಪ್ರೀತಂಗೌಡ ಎಲ್ಲರೂ ಸೇರಿ ಒಂದಾಗಿ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಹೈಕಮಾಂಡ್‌ ಹೇಳಿದಂತೆ ಮಾಡುತ್ತೇವೆ. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಗೊಂದಲ ಬೇಡ. ಎರಡು ಪಕ್ಷದ ಕಾರ್ಯಕರ್ತರ ಜೊತೆ ನಾನು ಇರುತ್ತೇನೆ ಎಂದು ಹೇಳಿದರು.

ಬಿಜೆಪಿಯ ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ನನ್ನ ತುಂಬ ಹೃದಯದ ಧನ್ಯವಾದ ತಿಳಿಸುತ್ತೇನೆ. ಹಲವು ಕಾರಣಗಳಿಂದ ಈಗ ಏನು ಹೇಳಲ್ಲ. ಎಲ್ಲದಕ್ಕೂ ಸಮಯ ನಿಗದಿಯಾಗುತ್ತದೆ. ನನ್ನ ಬಂಧನ ಅನಿರೀಕ್ಷಿತ ಅಲ್ಲ, ನಿರೀಕ್ಷಿತ. 51 ದಿನಗಳ ಬಳಿಕ ಜೈಲಿನಿಂದ ಹೊರಗೆ ಬಂದಿದ್ದೇನೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ಜಿಲ್ಲೆಯ ಕಾರ್ಯಕರ್ತರು, ನಾಯಕರನ್ನು ಉಸಿರು ಇರುವವರೆಗೂ ಯಾರನ್ನು ಮರೆಯುದಿಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

7 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

8 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

10 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

12 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

14 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

15 hours ago