ರಾಜ್ಯ

ಶೀಘ್ರವೇ ಪ್ರಧಾನಿ ಮೋದಿ, ಕೇಂದ್ರ ಸಚಿವರ ಭೇಟಿ: ವಕೀಲ ದೇವರಾಜೇಗೌಡ

ಹಾಸನ: ಕೇಂದ್ರದ ಅಧಿವೇಶನ ಮುಗಿದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುತ್ತೇನೆ. ಎಲ್ಲ ಕೇಂದ್ರ ಸಚಿವರನ್ನು ಕರೆದು ಜಿಲ್ಲೆಯಲ್ಲಿ ಬೃಹತ್‌ ಸಮಾವೇಶ ಮಾಡುತ್ತೇನೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದರು.

ಜೈಲಿನಿಂದ ಬಿಡುಗಡೆಯಾದ ಬಳಿಕ ಮಂಗಳವಾರ(ಜು.2) ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಕುಟುಂಬ ದ್ವೇಷಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಮಾನ ಹರಾಜಾಗಿದೆ. ಅಧಿಕಾರದ ಮದದಿಂದ ಮೆರೆಯುತ್ತಿರುವರಿಗೆ ಮುಂದೆ ತಕ್ಕ ಉತ್ತರ ಕೊಡುತ್ತೇನೆ. ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಒಂದು ಸ್ಥಾನವನ್ನು ಗೆಲ್ಲಬಾರದು ಎಂದು ಹೇಳಿದರು.

ಯಾವ ಜಿಲ್ಲೆಗೆ ಕಳಂಕ ತಂದರೋ, ಅದೇ ಜಿಲ್ಲೆಯಿಂದ ಸಂಘಟನೆ ಮಾಡುತ್ತಾನೆ. ಮಣ್ಣಿನ ಮಗ ದೇವೇಗೌಡರನ್ನ ಜಿಲ್ಲೆಗೆ ಕರೆದು ಸನ್ಮಾನ ಮಾಡುತ್ತೇನೆ. ಹೊಳೆನರಸೀಪುರ ಕ್ಷೇತ್ರದಲ್ಲಿ ಬೃಹತ್‌ ಕೈಗಾರಿಕೆ ಸ್ಥಾಪನೆಗೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡುತ್ತೇನೆ. ನಾನು ಹಾಗೂ ಪ್ರೀತಂಗೌಡ ಎಲ್ಲರೂ ಸೇರಿ ಒಂದಾಗಿ ಕೆಲಸ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಹೈಕಮಾಂಡ್‌ ಹೇಳಿದಂತೆ ಮಾಡುತ್ತೇವೆ. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಗೊಂದಲ ಬೇಡ. ಎರಡು ಪಕ್ಷದ ಕಾರ್ಯಕರ್ತರ ಜೊತೆ ನಾನು ಇರುತ್ತೇನೆ ಎಂದು ಹೇಳಿದರು.

ಬಿಜೆಪಿಯ ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ನನ್ನ ತುಂಬ ಹೃದಯದ ಧನ್ಯವಾದ ತಿಳಿಸುತ್ತೇನೆ. ಹಲವು ಕಾರಣಗಳಿಂದ ಈಗ ಏನು ಹೇಳಲ್ಲ. ಎಲ್ಲದಕ್ಕೂ ಸಮಯ ನಿಗದಿಯಾಗುತ್ತದೆ. ನನ್ನ ಬಂಧನ ಅನಿರೀಕ್ಷಿತ ಅಲ್ಲ, ನಿರೀಕ್ಷಿತ. 51 ದಿನಗಳ ಬಳಿಕ ಜೈಲಿನಿಂದ ಹೊರಗೆ ಬಂದಿದ್ದೇನೆ. ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು. ಜಿಲ್ಲೆಯ ಕಾರ್ಯಕರ್ತರು, ನಾಯಕರನ್ನು ಉಸಿರು ಇರುವವರೆಗೂ ಯಾರನ್ನು ಮರೆಯುದಿಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

4 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

5 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

5 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

5 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

7 hours ago