ರಾಜ್ಯ

ನವೆಂಬರ್.‌28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.28ರಂದು ಇತಿಹಾಸ ಪ್ರಸಿದ್ದ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಪೂಜ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗಾಗಿ ಆಚರಿಸಲ್ಪಡುವ ಪ್ರಾಚೀನ ಮಠದ ಬಗ್ಗೆ ರಾಷ್ಟ್ರೀಯ ಗಮನ ಸೆಳೆಯುವ ಮಹತ್ವದ ಸಂದರ್ಭವಾಗಿದೆ. ಮೋದಿ ಅವರು, ‘ಲಕ್ಷ ಗೀತ ಪಠಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಒಗ್ಗಟ್ಟಿನಿಂದ ಭಗವದ್ಗೀತೆಯನ್ನು ಪಠಿಸಲಿದ್ದಾರೆ. ಮೋದಿ ಕೃಷ್ಣ ದೇವಸ್ಥಾನಕ್ಕೂ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮಠದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತವು ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಭದ್ರತಾ ವ್ಯವಸ್ಥೆಗಳು ಮತ್ತು ಇತರ ಅಗತ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಗೀತಾ ಜಯಂತಿ ಅಂಗವಾಗಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿಯೂ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ:-ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್‌ ಚಿಕ್ಕಮಾದು

ಪ್ರಧಾನಮಂತ್ರಿ ಕಚೇರಿ ಈ ಭೇಟಿಯನ್ನು ಖಚಿತಪಡಿಸಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಲಿದ್ದಾರೆ. ಬಳಿಕ, ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇನ್ನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಕಳೆದ 2008ರಲ್ಲಿ ಸಿಎಂ ಮೋದಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಇದೀಗ ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲನೇ ಭೇಟಿಯಾಗಿದ್ದರೆ, ಒಟ್ಟಾರೆ 2ನೇ ಭೇಟಿಯಾಗಿದೆ. ವಿಶೇಷ ಅಂದರೆ ಅಂದೂ ಕೂಡ ಇದೇ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮೋದಿ ಅವರನ್ನು ಸ್ವಾಗತಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

56 mins ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

6 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago