ರಾಜ್ಯ

ನವೆಂಬರ್.‌28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್.28ರಂದು ಇತಿಹಾಸ ಪ್ರಸಿದ್ದ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ಅವರು ದೇವರ ದರ್ಶನ ಪಡೆದು, ಪೂಜ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಈ ಭೇಟಿಯು ಕರ್ನಾಟಕದಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗಾಗಿ ಆಚರಿಸಲ್ಪಡುವ ಪ್ರಾಚೀನ ಮಠದ ಬಗ್ಗೆ ರಾಷ್ಟ್ರೀಯ ಗಮನ ಸೆಳೆಯುವ ಮಹತ್ವದ ಸಂದರ್ಭವಾಗಿದೆ. ಮೋದಿ ಅವರು, ‘ಲಕ್ಷ ಗೀತ ಪಠಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಒಗ್ಗಟ್ಟಿನಿಂದ ಭಗವದ್ಗೀತೆಯನ್ನು ಪಠಿಸಲಿದ್ದಾರೆ. ಮೋದಿ ಕೃಷ್ಣ ದೇವಸ್ಥಾನಕ್ಕೂ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮಠದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತವು ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಭದ್ರತಾ ವ್ಯವಸ್ಥೆಗಳು ಮತ್ತು ಇತರ ಅಗತ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಗೀತಾ ಜಯಂತಿ ಅಂಗವಾಗಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿಯೂ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ:-ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ಅನಿಲ್‌ ಚಿಕ್ಕಮಾದು

ಪ್ರಧಾನಮಂತ್ರಿ ಕಚೇರಿ ಈ ಭೇಟಿಯನ್ನು ಖಚಿತಪಡಿಸಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಲಿದ್ದಾರೆ. ಬಳಿಕ, ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಇನ್ನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಕಳೆದ 2008ರಲ್ಲಿ ಸಿಎಂ ಮೋದಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಇದೀಗ ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲನೇ ಭೇಟಿಯಾಗಿದ್ದರೆ, ಒಟ್ಟಾರೆ 2ನೇ ಭೇಟಿಯಾಗಿದೆ. ವಿಶೇಷ ಅಂದರೆ ಅಂದೂ ಕೂಡ ಇದೇ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮೋದಿ ಅವರನ್ನು ಸ್ವಾಗತಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

5 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

5 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

5 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

5 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

5 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

8 hours ago