ಬೆಂಗಳೂರು: ನಗರದ ಸಂಚಾರದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮೆಟ್ರೋ ಹಂತ-3ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಂಕು ಸ್ಥಾಪನೆಯನ್ನು ನೆರವೇರಿಸಿದರು.
ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಟ್ರೋ ಹಂತ-3ಕ್ಕೆ ಮೋದಿಯವರು ಶಂಕುಸ್ಥಾಪನೆಯನ್ನು ನೆರವೇರಿಸಿದ್ದು, ಇದು 2028ಕ್ಕೆ ಸಾರ್ವಜನಿಕರ ಸೇವೆಗೆ ಲಭ್ಯವಾಗುವ ನಿರೀಕ್ಷೆಯಿದೆ.
ಸುಮಾರು 44.65 ಕಿ.ಮೀ. ದೂರದ ಅಂದಾಜು 15,615 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಒಟ್ಟು 2 ಕಾರಿಡಾರ್ನಲ್ಲಿ ಕಾಮಗಾರಿ ನಡೆಯಲಿದೆ. ಮೊದಲ ಕಾರಿಡಾರ್ ಜೆ.ಪಿ.ನಗರ 4ನೇ ಹಂತ ಕೆಂಪಾಪುರದಿಂದ 21 ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಿದರೆ, 2ನೇ ಕಾರಿಡಾರ್ ಹೊಸಹಳ್ಳಿಯಿಂದ ಕಡಬಗೆರೆಗೆ 9 ನಿಲ್ದಾಣಗಳನ್ನು ಒಳಗೊಳ್ಳಲಿದೆ.
ಕೆಲ ತಿಂಗಳ ಹಿಂದೆ ಈ 2 ಕಾರಿಡಾರ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿತ್ತು. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಬಿಎಂಆರ್ಸಿಎಲ್ ಪ್ರಾರಂಭಿಸಿದ್ದು, ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ಸಂಭವವಿದೆ.
ಒಂದನೇ ಕಾರಿಡಾರ್ ಮೂರು ಪ್ಯಾಕೇಜ್ಗಳಲ್ಲಿ, 2ನೇ ಕಾರಿಡಾರ್ 4 ಪ್ಯಾಕೇಜ್ಗಳಲ್ಲಿ ನಡೆಯಲಿದೆ. ಮೊದಲ ಪ್ಯಾಕೇಜ್ ಜೆ.ಪಿ.ನಗರ 4ನೇ ಹಂತದಿಂದ ಮೈಸೂರು ರಸ್ತೆಯ ಸರ್ವೇಯನ್ನು ಮುಗಿಸಿ ಅಂತಿಮ ಸೂಚನೆಯನ್ನು ಹೊರಡಿಸಲಾಗಿದೆ.
ಕಂಠೀರವ ಸ್ಟೇಡಿಯಂನಿಂದ ಕೆಂಪಾಪುರದವರೆಗಿನ ಮೂರನೇ ಪ್ಯಾಕೇಜ್ನಲ್ಲಿ 100 ಆಸ್ತಿಗಳನ್ನು ಗುರುತಿಸಲಾಗಿದೆ. ಮೈಸೂರು ರಸ್ತೆ-ಕಂಠೀರವ ಸ್ಟೇಡಿಯಂವರೆಗೆ 2ನೇ ಪ್ಯಾಕೇಜ್ ಸರ್ವೇ ನಡೆಯಲಿದೆ.
ಮೂರು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸುವಂತೆ ಬಿಎಂಆರ್ಸಿಎಲ್ ಸೂಚಿಸಿದೆ. ಕಾರಿಡಾರ್-2ಕ್ಕೆ ಸಂಬಂಧಿಸಿದಂತೆ ಸರ್ವೇ ನಡೆಯುತ್ತಿದ್ದು, ಭೂಸ್ವಾಧೀನ ಪ್ರಕ್ರಿಯೆ 8 ತಿಂಗಳಲ್ಲಿ ಪೂರ್ಣಗೊಳ್ಳಲಿದೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…