ಬೆಂಗಳೂರು: ನಗರದ ಸಂಚಾರದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮೆಟ್ರೋ ಹಂತ-3ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಂಕು ಸ್ಥಾಪನೆಯನ್ನು ನೆರವೇರಿಸಿದರು.
ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಟ್ರೋ ಹಂತ-3ಕ್ಕೆ ಮೋದಿಯವರು ಶಂಕುಸ್ಥಾಪನೆಯನ್ನು ನೆರವೇರಿಸಿದ್ದು, ಇದು 2028ಕ್ಕೆ ಸಾರ್ವಜನಿಕರ ಸೇವೆಗೆ ಲಭ್ಯವಾಗುವ ನಿರೀಕ್ಷೆಯಿದೆ.
ಸುಮಾರು 44.65 ಕಿ.ಮೀ. ದೂರದ ಅಂದಾಜು 15,615 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಒಟ್ಟು 2 ಕಾರಿಡಾರ್ನಲ್ಲಿ ಕಾಮಗಾರಿ ನಡೆಯಲಿದೆ. ಮೊದಲ ಕಾರಿಡಾರ್ ಜೆ.ಪಿ.ನಗರ 4ನೇ ಹಂತ ಕೆಂಪಾಪುರದಿಂದ 21 ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಿದರೆ, 2ನೇ ಕಾರಿಡಾರ್ ಹೊಸಹಳ್ಳಿಯಿಂದ ಕಡಬಗೆರೆಗೆ 9 ನಿಲ್ದಾಣಗಳನ್ನು ಒಳಗೊಳ್ಳಲಿದೆ.
ಕೆಲ ತಿಂಗಳ ಹಿಂದೆ ಈ 2 ಕಾರಿಡಾರ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿತ್ತು. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಬಿಎಂಆರ್ಸಿಎಲ್ ಪ್ರಾರಂಭಿಸಿದ್ದು, ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ಸಂಭವವಿದೆ.
ಒಂದನೇ ಕಾರಿಡಾರ್ ಮೂರು ಪ್ಯಾಕೇಜ್ಗಳಲ್ಲಿ, 2ನೇ ಕಾರಿಡಾರ್ 4 ಪ್ಯಾಕೇಜ್ಗಳಲ್ಲಿ ನಡೆಯಲಿದೆ. ಮೊದಲ ಪ್ಯಾಕೇಜ್ ಜೆ.ಪಿ.ನಗರ 4ನೇ ಹಂತದಿಂದ ಮೈಸೂರು ರಸ್ತೆಯ ಸರ್ವೇಯನ್ನು ಮುಗಿಸಿ ಅಂತಿಮ ಸೂಚನೆಯನ್ನು ಹೊರಡಿಸಲಾಗಿದೆ.
ಕಂಠೀರವ ಸ್ಟೇಡಿಯಂನಿಂದ ಕೆಂಪಾಪುರದವರೆಗಿನ ಮೂರನೇ ಪ್ಯಾಕೇಜ್ನಲ್ಲಿ 100 ಆಸ್ತಿಗಳನ್ನು ಗುರುತಿಸಲಾಗಿದೆ. ಮೈಸೂರು ರಸ್ತೆ-ಕಂಠೀರವ ಸ್ಟೇಡಿಯಂವರೆಗೆ 2ನೇ ಪ್ಯಾಕೇಜ್ ಸರ್ವೇ ನಡೆಯಲಿದೆ.
ಮೂರು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸುವಂತೆ ಬಿಎಂಆರ್ಸಿಎಲ್ ಸೂಚಿಸಿದೆ. ಕಾರಿಡಾರ್-2ಕ್ಕೆ ಸಂಬಂಧಿಸಿದಂತೆ ಸರ್ವೇ ನಡೆಯುತ್ತಿದ್ದು, ಭೂಸ್ವಾಧೀನ ಪ್ರಕ್ರಿಯೆ 8 ತಿಂಗಳಲ್ಲಿ ಪೂರ್ಣಗೊಳ್ಳಲಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…