ರಾಜ್ಯ

ನಮ್ಮ ಮೆಟ್ರೋ 3ನೇ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

ಬೆಂಗಳೂರು: ನಗರದ ಸಂಚಾರದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮೆಟ್ರೋ ಹಂತ-3ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಂಕು ಸ್ಥಾಪನೆಯನ್ನು ನೆರವೇರಿಸಿದರು.

ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಟ್ರೋ ಹಂತ-3ಕ್ಕೆ ಮೋದಿಯವರು ಶಂಕುಸ್ಥಾಪನೆಯನ್ನು ನೆರವೇರಿಸಿದ್ದು, ಇದು 2028ಕ್ಕೆ ಸಾರ್ವಜನಿಕರ ಸೇವೆಗೆ ಲಭ್ಯವಾಗುವ ನಿರೀಕ್ಷೆಯಿದೆ.

ಸುಮಾರು 44.65 ಕಿ.ಮೀ. ದೂರದ ಅಂದಾಜು 15,615 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಒಟ್ಟು 2 ಕಾರಿಡಾರ್‌ನಲ್ಲಿ ಕಾಮಗಾರಿ ನಡೆಯಲಿದೆ. ಮೊದಲ ಕಾರಿಡಾರ್ ಜೆ.ಪಿ.ನಗರ 4ನೇ ಹಂತ ಕೆಂಪಾಪುರದಿಂದ 21 ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಿದರೆ, 2ನೇ ಕಾರಿಡಾರ್ ಹೊಸಹಳ್ಳಿಯಿಂದ ಕಡಬಗೆರೆಗೆ 9 ನಿಲ್ದಾಣಗಳನ್ನು ಒಳಗೊಳ್ಳಲಿದೆ.

ಕೆಲ ತಿಂಗಳ ಹಿಂದೆ ಈ 2 ಕಾರಿಡಾರ್ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯನ್ನು ನೀಡಿತ್ತು. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಬಿಎಂಆರ್‍ಸಿಎಲ್ ಪ್ರಾರಂಭಿಸಿದ್ದು, ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ಸಂಭವವಿದೆ.

ಒಂದನೇ ಕಾರಿಡಾರ್ ಮೂರು ಪ್ಯಾಕೇಜ್‍ಗಳಲ್ಲಿ, 2ನೇ ಕಾರಿಡಾರ್ 4 ಪ್ಯಾಕೇಜ್‍ಗಳಲ್ಲಿ ನಡೆಯಲಿದೆ. ಮೊದಲ ಪ್ಯಾಕೇಜ್ ಜೆ.ಪಿ.ನಗರ 4ನೇ ಹಂತದಿಂದ ಮೈಸೂರು ರಸ್ತೆಯ ಸರ್ವೇಯನ್ನು ಮುಗಿಸಿ ಅಂತಿಮ ಸೂಚನೆಯನ್ನು ಹೊರಡಿಸಲಾಗಿದೆ.

ಕಂಠೀರವ ಸ್ಟೇಡಿಯಂನಿಂದ ಕೆಂಪಾಪುರದವರೆಗಿನ ಮೂರನೇ ಪ್ಯಾಕೇಜ್‍ನಲ್ಲಿ 100 ಆಸ್ತಿಗಳನ್ನು ಗುರುತಿಸಲಾಗಿದೆ. ಮೈಸೂರು ರಸ್ತೆ-ಕಂಠೀರವ ಸ್ಟೇಡಿಯಂವರೆಗೆ 2ನೇ ಪ್ಯಾಕೇಜ್ ಸರ್ವೇ ನಡೆಯಲಿದೆ.

ಮೂರು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸುವಂತೆ ಬಿಎಂಆರ್‍ಸಿಎಲ್ ಸೂಚಿಸಿದೆ. ಕಾರಿಡಾರ್-2ಕ್ಕೆ ಸಂಬಂಧಿಸಿದಂತೆ ಸರ್ವೇ ನಡೆಯುತ್ತಿದ್ದು, ಭೂಸ್ವಾಧೀನ ಪ್ರಕ್ರಿಯೆ 8 ತಿಂಗಳಲ್ಲಿ ಪೂರ್ಣಗೊಳ್ಳಲಿದೆ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

6 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

7 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

9 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

12 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

13 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

19 hours ago