ರಾಜ್ಯ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ : ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಆರೋಗ್ಯ ಮತ್ತು ಶಿಕ್ಷಣ ನಮಗೆಲ್ಲರಿಗೂ ಅತ್ಯಗತ್ಯವಾಗಿದೆ. ಇದರ ಮೂಲಕವೇ ಸುಸ್ಥಿತ ಅಭಿವೃದ್ಧಿಗೆ ಆದ್ಯತ ನೀಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮರ್ಪಕವಾಗಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಆರ್. ಪಾಟೀಲ್ ತಿಳಿಸಿದ್ದಾರೆ.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30 ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವಧೂತರಾದ ವಿನಯ್‌ ಗುರೂಜಿ ಸಮ್ಮುಖದಲ್ಲಿ ಸಚಿವರು ಗುರುವಾರ ಭಾಷಣ ಮಾಡಿದರು. ಒಂದು ನಾಡು ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಅಡಿಪಾಯ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ಜವಾಹರಲಾಲ್‌ ನೆಹರೂ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು ಎಂದು ತಿಳಿಸಿದರು.

ಅಲಹಾಬಾದ್ ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದ ಸಂದರ್ಭದಲ್ಲಿ- ವಿಶ್ವವಿದ್ಯಾಲಯವು ಮಾನವತಾವಾದಕ್ಕಾಗಿ, ಸಹಿಷ್ಣುತೆಗಾಗಿ, ಸತ್ಯದ ಹುಡುಕಾಟಕ್ಕಾಗಿ ನಿಂತಿದೆ ಎಂದು ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೇಳಿದ್ದನ್ನು ನಾವು ಸ್ಮರಿಸುತ್ತೇನೆ. ಅಂದಿನಿಂದ ಇಂದಿನವರೆಗೂ ನಾಡಿನ ಅಭಿವೃದ್ಧಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ತಿಳಿಸಿದರು.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ವಿವರಿಸಿರುವ ಜಾಗತಿಕ ಆದ್ಯತೆಗಳೊಂದಿಗೆ ನಾವು ನಮ್ಮನ್ನು ಹೊಂದಿಸಿಕೊಳ್ಳುವುದು ಅತ್ಯಗತ್ಯ. ಉತ್ತಮ ಆರೋಗ್ಯ, ಯೋಗಕ್ಷೇಮ, ಗುಣಮಟ್ಟದ ಶಿಕ್ಷಣವು ಇದಕ್ಕೆ ಪೂರಕವಾಗಿರಬೇಕು. ಆರೋಗ್ಯ ಮತ್ತು ಶಿಕ್ಷಣ ಕೇವಲ ಗುರಿಗಳಲ್ಲ. ಅವು ಮಾನವ ಘನತೆಯಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್ ಮತ್ತು AI-ಚಾಲಿತ ರೋಗನಿರ್ಣಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ನಾವೀನ್ಯತೆಯೊಂದಿಗೆ ಸಾರ್ವಜನಿಕ ಅಗತ್ಯವನ್ನು ಪೂರೈಸುವ ಮತ್ತು ಜ್ಞಾನವು ಕಾರ್ಯರೂಪಕ್ಕೆ ತರುವ ಕೇಂದ್ರವಾಗಿದೆ ಎಂದು ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಅವದೂತ ವಿನಯ್‌ ಗುರೂಜಿ ಜೀವನ ಶೈಲಿ ನಿರ್ವಹಣೆ ಮತ್ತು ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ಮಾತನಾಡಿದರು. ಖ್ಯಾತ ನೈಸರ್ಗಿಕ ಪೌಷ್ಟಿಕ ತಜ್ಞರಾದ ಡಾ. ಗೌರಿ ರೊಕ್ಕಮ್ ಆಹಾರ ಮತ್ತು ಪೌಷ್ಟಿಕತೆ ಬಗ್ಗೆ ಮಾತನಾಡಿದರು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್‌, ಪಿ.ಆರ್‌.ಶಿವಪ್ರಸಾದ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಆಂದೋಲನ ವಿಶೇಷ ; ಸೋನಂ ವಾಂಗ್ಚುಕ್ ದಿಢೀರ್ ಬಿಡುಗಡೆ ‌

• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…

1 hour ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ

ಮಹಾದೇಶ್‌ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…

2 hours ago

ಮತ್ತೆ ಚಿಗುರೊಡೆದ ಎಂಡಿಎ ಹೊಸ ಬಡಾವಣೆಯ ಕನಸು

ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…

2 hours ago

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

12 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

13 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

13 hours ago