ರಾಜ್ಯ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ : ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಆರೋಗ್ಯ ಮತ್ತು ಶಿಕ್ಷಣ ನಮಗೆಲ್ಲರಿಗೂ ಅತ್ಯಗತ್ಯವಾಗಿದೆ. ಇದರ ಮೂಲಕವೇ ಸುಸ್ಥಿತ ಅಭಿವೃದ್ಧಿಗೆ ಆದ್ಯತ ನೀಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮರ್ಪಕವಾಗಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಆರ್. ಪಾಟೀಲ್ ತಿಳಿಸಿದ್ದಾರೆ.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30 ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವಧೂತರಾದ ವಿನಯ್‌ ಗುರೂಜಿ ಸಮ್ಮುಖದಲ್ಲಿ ಸಚಿವರು ಗುರುವಾರ ಭಾಷಣ ಮಾಡಿದರು. ಒಂದು ನಾಡು ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಅಡಿಪಾಯ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ಜವಾಹರಲಾಲ್‌ ನೆಹರೂ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು ಎಂದು ತಿಳಿಸಿದರು.

ಅಲಹಾಬಾದ್ ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದ ಸಂದರ್ಭದಲ್ಲಿ- ವಿಶ್ವವಿದ್ಯಾಲಯವು ಮಾನವತಾವಾದಕ್ಕಾಗಿ, ಸಹಿಷ್ಣುತೆಗಾಗಿ, ಸತ್ಯದ ಹುಡುಕಾಟಕ್ಕಾಗಿ ನಿಂತಿದೆ ಎಂದು ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೇಳಿದ್ದನ್ನು ನಾವು ಸ್ಮರಿಸುತ್ತೇನೆ. ಅಂದಿನಿಂದ ಇಂದಿನವರೆಗೂ ನಾಡಿನ ಅಭಿವೃದ್ಧಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ತಿಳಿಸಿದರು.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ವಿವರಿಸಿರುವ ಜಾಗತಿಕ ಆದ್ಯತೆಗಳೊಂದಿಗೆ ನಾವು ನಮ್ಮನ್ನು ಹೊಂದಿಸಿಕೊಳ್ಳುವುದು ಅತ್ಯಗತ್ಯ. ಉತ್ತಮ ಆರೋಗ್ಯ, ಯೋಗಕ್ಷೇಮ, ಗುಣಮಟ್ಟದ ಶಿಕ್ಷಣವು ಇದಕ್ಕೆ ಪೂರಕವಾಗಿರಬೇಕು. ಆರೋಗ್ಯ ಮತ್ತು ಶಿಕ್ಷಣ ಕೇವಲ ಗುರಿಗಳಲ್ಲ. ಅವು ಮಾನವ ಘನತೆಯಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್ ಮತ್ತು AI-ಚಾಲಿತ ರೋಗನಿರ್ಣಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ನಾವೀನ್ಯತೆಯೊಂದಿಗೆ ಸಾರ್ವಜನಿಕ ಅಗತ್ಯವನ್ನು ಪೂರೈಸುವ ಮತ್ತು ಜ್ಞಾನವು ಕಾರ್ಯರೂಪಕ್ಕೆ ತರುವ ಕೇಂದ್ರವಾಗಿದೆ ಎಂದು ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಅವದೂತ ವಿನಯ್‌ ಗುರೂಜಿ ಜೀವನ ಶೈಲಿ ನಿರ್ವಹಣೆ ಮತ್ತು ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ಮಾತನಾಡಿದರು. ಖ್ಯಾತ ನೈಸರ್ಗಿಕ ಪೌಷ್ಟಿಕ ತಜ್ಞರಾದ ಡಾ. ಗೌರಿ ರೊಕ್ಕಮ್ ಆಹಾರ ಮತ್ತು ಪೌಷ್ಟಿಕತೆ ಬಗ್ಗೆ ಮಾತನಾಡಿದರು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್‌, ಪಿ.ಆರ್‌.ಶಿವಪ್ರಸಾದ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

5 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago