Priority to Quality Education: Minister Dr. Sharanprakash Patil
ಬೆಂಗಳೂರು : ಆರೋಗ್ಯ ಮತ್ತು ಶಿಕ್ಷಣ ನಮಗೆಲ್ಲರಿಗೂ ಅತ್ಯಗತ್ಯವಾಗಿದೆ. ಇದರ ಮೂಲಕವೇ ಸುಸ್ಥಿತ ಅಭಿವೃದ್ಧಿಗೆ ಆದ್ಯತ ನೀಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮರ್ಪಕವಾಗಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30 ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವಧೂತರಾದ ವಿನಯ್ ಗುರೂಜಿ ಸಮ್ಮುಖದಲ್ಲಿ ಸಚಿವರು ಗುರುವಾರ ಭಾಷಣ ಮಾಡಿದರು. ಒಂದು ನಾಡು ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಅಡಿಪಾಯ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ಜವಾಹರಲಾಲ್ ನೆಹರೂ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು ಎಂದು ತಿಳಿಸಿದರು.
ಅಲಹಾಬಾದ್ ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದ ಸಂದರ್ಭದಲ್ಲಿ- ವಿಶ್ವವಿದ್ಯಾಲಯವು ಮಾನವತಾವಾದಕ್ಕಾಗಿ, ಸಹಿಷ್ಣುತೆಗಾಗಿ, ಸತ್ಯದ ಹುಡುಕಾಟಕ್ಕಾಗಿ ನಿಂತಿದೆ ಎಂದು ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೇಳಿದ್ದನ್ನು ನಾವು ಸ್ಮರಿಸುತ್ತೇನೆ. ಅಂದಿನಿಂದ ಇಂದಿನವರೆಗೂ ನಾಡಿನ ಅಭಿವೃದ್ಧಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ತಿಳಿಸಿದರು.
ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ವಿವರಿಸಿರುವ ಜಾಗತಿಕ ಆದ್ಯತೆಗಳೊಂದಿಗೆ ನಾವು ನಮ್ಮನ್ನು ಹೊಂದಿಸಿಕೊಳ್ಳುವುದು ಅತ್ಯಗತ್ಯ. ಉತ್ತಮ ಆರೋಗ್ಯ, ಯೋಗಕ್ಷೇಮ, ಗುಣಮಟ್ಟದ ಶಿಕ್ಷಣವು ಇದಕ್ಕೆ ಪೂರಕವಾಗಿರಬೇಕು. ಆರೋಗ್ಯ ಮತ್ತು ಶಿಕ್ಷಣ ಕೇವಲ ಗುರಿಗಳಲ್ಲ. ಅವು ಮಾನವ ಘನತೆಯಾಗಿದೆ ಎಂದು ಡಾ. ಪಾಟೀಲ್ ವಿವರಿಸಿದರು.
ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್ ಮತ್ತು AI-ಚಾಲಿತ ರೋಗನಿರ್ಣಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ನಾವೀನ್ಯತೆಯೊಂದಿಗೆ ಸಾರ್ವಜನಿಕ ಅಗತ್ಯವನ್ನು ಪೂರೈಸುವ ಮತ್ತು ಜ್ಞಾನವು ಕಾರ್ಯರೂಪಕ್ಕೆ ತರುವ ಕೇಂದ್ರವಾಗಿದೆ ಎಂದು ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಅವದೂತ ವಿನಯ್ ಗುರೂಜಿ ಜೀವನ ಶೈಲಿ ನಿರ್ವಹಣೆ ಮತ್ತು ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ಮಾತನಾಡಿದರು. ಖ್ಯಾತ ನೈಸರ್ಗಿಕ ಪೌಷ್ಟಿಕ ತಜ್ಞರಾದ ಡಾ. ಗೌರಿ ರೊಕ್ಕಮ್ ಆಹಾರ ಮತ್ತು ಪೌಷ್ಟಿಕತೆ ಬಗ್ಗೆ ಮಾತನಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್, ಪಿ.ಆರ್.ಶಿವಪ್ರಸಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…