ರಾಜ್ಯ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ : ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಆರೋಗ್ಯ ಮತ್ತು ಶಿಕ್ಷಣ ನಮಗೆಲ್ಲರಿಗೂ ಅತ್ಯಗತ್ಯವಾಗಿದೆ. ಇದರ ಮೂಲಕವೇ ಸುಸ್ಥಿತ ಅಭಿವೃದ್ಧಿಗೆ ಆದ್ಯತ ನೀಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮರ್ಪಕವಾಗಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಆರ್. ಪಾಟೀಲ್ ತಿಳಿಸಿದ್ದಾರೆ.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30 ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವಧೂತರಾದ ವಿನಯ್‌ ಗುರೂಜಿ ಸಮ್ಮುಖದಲ್ಲಿ ಸಚಿವರು ಗುರುವಾರ ಭಾಷಣ ಮಾಡಿದರು. ಒಂದು ನಾಡು ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಅಡಿಪಾಯ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ಜವಾಹರಲಾಲ್‌ ನೆಹರೂ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು ಎಂದು ತಿಳಿಸಿದರು.

ಅಲಹಾಬಾದ್ ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದ ಸಂದರ್ಭದಲ್ಲಿ- ವಿಶ್ವವಿದ್ಯಾಲಯವು ಮಾನವತಾವಾದಕ್ಕಾಗಿ, ಸಹಿಷ್ಣುತೆಗಾಗಿ, ಸತ್ಯದ ಹುಡುಕಾಟಕ್ಕಾಗಿ ನಿಂತಿದೆ ಎಂದು ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೇಳಿದ್ದನ್ನು ನಾವು ಸ್ಮರಿಸುತ್ತೇನೆ. ಅಂದಿನಿಂದ ಇಂದಿನವರೆಗೂ ನಾಡಿನ ಅಭಿವೃದ್ಧಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ತಿಳಿಸಿದರು.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ವಿವರಿಸಿರುವ ಜಾಗತಿಕ ಆದ್ಯತೆಗಳೊಂದಿಗೆ ನಾವು ನಮ್ಮನ್ನು ಹೊಂದಿಸಿಕೊಳ್ಳುವುದು ಅತ್ಯಗತ್ಯ. ಉತ್ತಮ ಆರೋಗ್ಯ, ಯೋಗಕ್ಷೇಮ, ಗುಣಮಟ್ಟದ ಶಿಕ್ಷಣವು ಇದಕ್ಕೆ ಪೂರಕವಾಗಿರಬೇಕು. ಆರೋಗ್ಯ ಮತ್ತು ಶಿಕ್ಷಣ ಕೇವಲ ಗುರಿಗಳಲ್ಲ. ಅವು ಮಾನವ ಘನತೆಯಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್ ಮತ್ತು AI-ಚಾಲಿತ ರೋಗನಿರ್ಣಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ನಾವೀನ್ಯತೆಯೊಂದಿಗೆ ಸಾರ್ವಜನಿಕ ಅಗತ್ಯವನ್ನು ಪೂರೈಸುವ ಮತ್ತು ಜ್ಞಾನವು ಕಾರ್ಯರೂಪಕ್ಕೆ ತರುವ ಕೇಂದ್ರವಾಗಿದೆ ಎಂದು ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಅವದೂತ ವಿನಯ್‌ ಗುರೂಜಿ ಜೀವನ ಶೈಲಿ ನಿರ್ವಹಣೆ ಮತ್ತು ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ಮಾತನಾಡಿದರು. ಖ್ಯಾತ ನೈಸರ್ಗಿಕ ಪೌಷ್ಟಿಕ ತಜ್ಞರಾದ ಡಾ. ಗೌರಿ ರೊಕ್ಕಮ್ ಆಹಾರ ಮತ್ತು ಪೌಷ್ಟಿಕತೆ ಬಗ್ಗೆ ಮಾತನಾಡಿದರು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್‌, ಪಿ.ಆರ್‌.ಶಿವಪ್ರಸಾದ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

25 mins ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

54 mins ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

2 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

6 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

6 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

6 hours ago