ರಾಜ್ಯ

ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ : ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ಆರೋಗ್ಯ ಮತ್ತು ಶಿಕ್ಷಣ ನಮಗೆಲ್ಲರಿಗೂ ಅತ್ಯಗತ್ಯವಾಗಿದೆ. ಇದರ ಮೂಲಕವೇ ಸುಸ್ಥಿತ ಅಭಿವೃದ್ಧಿಗೆ ಆದ್ಯತ ನೀಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮರ್ಪಕವಾಗಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಆರ್. ಪಾಟೀಲ್ ತಿಳಿಸಿದ್ದಾರೆ.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ 30 ನೇ ಸಂಸ್ಥಾಪನಾ ದಿನ ಸಮಾರಂಭದಲ್ಲಿ ಅವಧೂತರಾದ ವಿನಯ್‌ ಗುರೂಜಿ ಸಮ್ಮುಖದಲ್ಲಿ ಸಚಿವರು ಗುರುವಾರ ಭಾಷಣ ಮಾಡಿದರು. ಒಂದು ನಾಡು ಅಭಿವೃದ್ಧಿಯಾಗಬೇಕಾದರೆ ಶಿಕ್ಷಣದ ಅಡಿಪಾಯ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ದೂರದೃಷ್ಟಿಯನ್ನಿಟ್ಟುಕೊಂಡು ಜವಾಹರಲಾಲ್‌ ನೆಹರೂ ಅವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದರು ಎಂದು ತಿಳಿಸಿದರು.

ಅಲಹಾಬಾದ್ ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದ ಸಂದರ್ಭದಲ್ಲಿ- ವಿಶ್ವವಿದ್ಯಾಲಯವು ಮಾನವತಾವಾದಕ್ಕಾಗಿ, ಸಹಿಷ್ಣುತೆಗಾಗಿ, ಸತ್ಯದ ಹುಡುಕಾಟಕ್ಕಾಗಿ ನಿಂತಿದೆ ಎಂದು ನಮ್ಮ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಹೇಳಿದ್ದನ್ನು ನಾವು ಸ್ಮರಿಸುತ್ತೇನೆ. ಅಂದಿನಿಂದ ಇಂದಿನವರೆಗೂ ನಾಡಿನ ಅಭಿವೃದ್ಧಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ತಿಳಿಸಿದರು.

ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ (SDG) ವಿವರಿಸಿರುವ ಜಾಗತಿಕ ಆದ್ಯತೆಗಳೊಂದಿಗೆ ನಾವು ನಮ್ಮನ್ನು ಹೊಂದಿಸಿಕೊಳ್ಳುವುದು ಅತ್ಯಗತ್ಯ. ಉತ್ತಮ ಆರೋಗ್ಯ, ಯೋಗಕ್ಷೇಮ, ಗುಣಮಟ್ಟದ ಶಿಕ್ಷಣವು ಇದಕ್ಕೆ ಪೂರಕವಾಗಿರಬೇಕು. ಆರೋಗ್ಯ ಮತ್ತು ಶಿಕ್ಷಣ ಕೇವಲ ಗುರಿಗಳಲ್ಲ. ಅವು ಮಾನವ ಘನತೆಯಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್ ಮತ್ತು AI-ಚಾಲಿತ ರೋಗನಿರ್ಣಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ನಾವೀನ್ಯತೆಯೊಂದಿಗೆ ಸಾರ್ವಜನಿಕ ಅಗತ್ಯವನ್ನು ಪೂರೈಸುವ ಮತ್ತು ಜ್ಞಾನವು ಕಾರ್ಯರೂಪಕ್ಕೆ ತರುವ ಕೇಂದ್ರವಾಗಿದೆ ಎಂದು ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಅವದೂತ ವಿನಯ್‌ ಗುರೂಜಿ ಜೀವನ ಶೈಲಿ ನಿರ್ವಹಣೆ ಮತ್ತು ಆಧ್ಯಾತ್ಮಿಕ ಚಿಂತನೆ ವಿಷಯದ ಕುರಿತು ಮಾತನಾಡಿದರು. ಖ್ಯಾತ ನೈಸರ್ಗಿಕ ಪೌಷ್ಟಿಕ ತಜ್ಞರಾದ ಡಾ. ಗೌರಿ ರೊಕ್ಕಮ್ ಆಹಾರ ಮತ್ತು ಪೌಷ್ಟಿಕತೆ ಬಗ್ಗೆ ಮಾತನಾಡಿದರು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಉಪ ಕುಲಪತಿ ಡಾ. ಭಗವಾನ್‌, ಪಿ.ಆರ್‌.ಶಿವಪ್ರಸಾದ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago