ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರಾಜ್ಯದ ಕೃಷಿ ಕ್ಷೇತ್ರದ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯ ಭಾಗವಾಗಿರುವ ಅನೇಕ ಸಂಸ್ಥೆಗಳಲ್ಲಿ ಇದು ಒಂದು ಎಂದರು.
ಮಲ್ಟಿಪ್ಲೆಕ್ಸ್ ಸಂಸ್ಥೆ ರಾಸಾಯನಿಕ ಉತ್ಪನ್ನಗಳಲ್ಲದೆ ಗುಣಮಟ್ಟದ ಪರಿಸರ ಸ್ನೇಹಿ, ಬಹು ಉಪಯೋಗಿ ಜೈವಿಕ ಗೊಬ್ಬರಗಳನ್ನು ಉತ್ಪಾದಿಸುತ್ತಾ ಬಂದಿರುವುದು ಉದ್ಯಮದಲ್ಲಿ ಯಶಸ್ಸಿಗೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ಈ ಸಂಸ್ಥೆಯ ಪ್ರಯೋಗಾಲಯಗಳಿಗೆ ಎನ್.ಎ ಡಿ.ಎಲ್ ಮಾನ್ಯತೆ ಕೂಡ ಸಿಕ್ಕಿದೆ ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.
ಮಲ್ಟಿಪ್ಲೆಕ್ಸ್ ಸಂಸ್ಥೆ ಸಂಶೋಧನೆ, ಉತ್ಪಾದನೆ ಮತ್ತು ಪೂರೈಕೆ ಕ್ಷೇತ್ರದಲ್ಲಿ ಇದಕ್ಕಾಗಿ ಸಾರ್ಥಕ 50 ವರ್ಷಗಳ ಸೇವೆ ಅಭೂತಪೂರ್ವ ಯಶಸ್ಸಿನ ಸಂಕೇತವಾಗಿದೆ. ಸಂಸ್ಥಾಪಕರಾದ ಜಿ.ಪಿ.ಶೆಟ್ಟಿ ಹಾಗೂ ಅದನ್ನು ಮುನ್ನಡೆಸುತ್ತಿರುವ ಮಹೇಶ್ ಶೆಟ್ಟಿರವರ ಶ್ರಮ, ಮುಂದಾಲೋಚನೆ, ಔದ್ಯೋಗಿಕ ಕುಶಲತೆ ಅಭಿನಂದನೀಯ ಎಂದರು.
ರಾಜ್ಯ ಸರ್ಕಾರದ ಕೃಷಿ ಕ್ಷೇತ್ರ ಅಭ್ಯುದಯಕ್ಕೆ ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ.
ಕೃಷಿ, ಯಾಂತ್ರೀಕರಣ ಹಾಗೂ ತಂತ್ರಜ್ಞಾನದ ವರ್ಗಾವಣೆಗೆ ಆದ್ಯತೆ ನೀಡಿದ್ದು, ಕಳೆದ ವರ್ಷ ಸುಮಾರು 1 ಸಾವಿರ ಕೋಟಿ ರೂಪಾಯಿಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಜಾರಿಗೊಳಿಸಿದ್ದು, ರೈತರು ಬೆಳೆದ ಬೆಳೆಯ ಕಟಾವು ಪ್ರಕ್ರಿಯೆ ಸುಗಮಗೊಳಿಸಲು ದೊಡ್ಡ ದೊಡ್ಡ ಯಂತ್ರಗಳನ್ನು ರೈತರು ಹಾಗೂ ಸಂಘ ಸಂಸ್ಥೆಗಳಿಗೆ ಹೆಚ್ಚಿನ ಸಹಾಯಧನದೊಂದಿಗೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರು ತಿಳಿಸಿದರು.
ಸೌದಿ ಅರೇಬಿಯಾದ ರಾಜಕುಮಾರ, ಕೇಂದ್ರ ಜವಳಿ ಖಾತೆ ಸಚಿವರಾದ ಗಿರಿರಾಜ್ ಸಿಂಗ್, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ರಾಮನಾಥ್ ಠಾಕೂರ್, ಜಿಬುಟಿ ರಾಷ್ಟ್ರದ ಕೃಷಿ ಸಚಿವರಾದ ಮಹಮದ್ ಅಹಮದ್ ಅವಲ್ಹೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಲ್ಟಿಪ್ಲೆಕ್ಸ್ ಸಂಸ್ಥೆಯ ಸಂಸ್ಥಾಪಕರಾದ ಜಿ.ಪಿ.ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಶೆಟ್ಟಿ ಹಾಗೂ ಅವರ ಧರ್ಮಪತ್ನಿ ನಿಶ್ಚಿತಾ ಎಂ.ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…
ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…
ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…
ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…