ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ರಾಜ್ಯದ ಕೃಷಿ ಕ್ಷೇತ್ರದ ಉದ್ಯಮದಲ್ಲಿ ಮುಂಚೂಣಿಯಲ್ಲಿದ್ದು, ಕೃಷಿಯ ಭಾಗವಾಗಿರುವ ಅನೇಕ ಸಂಸ್ಥೆಗಳಲ್ಲಿ ಇದು ಒಂದು ಎಂದರು.
ಮಲ್ಟಿಪ್ಲೆಕ್ಸ್ ಸಂಸ್ಥೆ ರಾಸಾಯನಿಕ ಉತ್ಪನ್ನಗಳಲ್ಲದೆ ಗುಣಮಟ್ಟದ ಪರಿಸರ ಸ್ನೇಹಿ, ಬಹು ಉಪಯೋಗಿ ಜೈವಿಕ ಗೊಬ್ಬರಗಳನ್ನು ಉತ್ಪಾದಿಸುತ್ತಾ ಬಂದಿರುವುದು ಉದ್ಯಮದಲ್ಲಿ ಯಶಸ್ಸಿಗೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ಈ ಸಂಸ್ಥೆಯ ಪ್ರಯೋಗಾಲಯಗಳಿಗೆ ಎನ್.ಎ ಡಿ.ಎಲ್ ಮಾನ್ಯತೆ ಕೂಡ ಸಿಕ್ಕಿದೆ ಎಂದು ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.
ಮಲ್ಟಿಪ್ಲೆಕ್ಸ್ ಸಂಸ್ಥೆ ಸಂಶೋಧನೆ, ಉತ್ಪಾದನೆ ಮತ್ತು ಪೂರೈಕೆ ಕ್ಷೇತ್ರದಲ್ಲಿ ಇದಕ್ಕಾಗಿ ಸಾರ್ಥಕ 50 ವರ್ಷಗಳ ಸೇವೆ ಅಭೂತಪೂರ್ವ ಯಶಸ್ಸಿನ ಸಂಕೇತವಾಗಿದೆ. ಸಂಸ್ಥಾಪಕರಾದ ಜಿ.ಪಿ.ಶೆಟ್ಟಿ ಹಾಗೂ ಅದನ್ನು ಮುನ್ನಡೆಸುತ್ತಿರುವ ಮಹೇಶ್ ಶೆಟ್ಟಿರವರ ಶ್ರಮ, ಮುಂದಾಲೋಚನೆ, ಔದ್ಯೋಗಿಕ ಕುಶಲತೆ ಅಭಿನಂದನೀಯ ಎಂದರು.
ರಾಜ್ಯ ಸರ್ಕಾರದ ಕೃಷಿ ಕ್ಷೇತ್ರ ಅಭ್ಯುದಯಕ್ಕೆ ಹತ್ತಾರು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ.
ಕೃಷಿ, ಯಾಂತ್ರೀಕರಣ ಹಾಗೂ ತಂತ್ರಜ್ಞಾನದ ವರ್ಗಾವಣೆಗೆ ಆದ್ಯತೆ ನೀಡಿದ್ದು, ಕಳೆದ ವರ್ಷ ಸುಮಾರು 1 ಸಾವಿರ ಕೋಟಿ ರೂಪಾಯಿಗಳನ್ನು ಇದಕ್ಕಾಗಿ ವೆಚ್ಚ ಮಾಡಲಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಜಾರಿಗೊಳಿಸಿದ್ದು, ರೈತರು ಬೆಳೆದ ಬೆಳೆಯ ಕಟಾವು ಪ್ರಕ್ರಿಯೆ ಸುಗಮಗೊಳಿಸಲು ದೊಡ್ಡ ದೊಡ್ಡ ಯಂತ್ರಗಳನ್ನು ರೈತರು ಹಾಗೂ ಸಂಘ ಸಂಸ್ಥೆಗಳಿಗೆ ಹೆಚ್ಚಿನ ಸಹಾಯಧನದೊಂದಿಗೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರು ತಿಳಿಸಿದರು.
ಸೌದಿ ಅರೇಬಿಯಾದ ರಾಜಕುಮಾರ, ಕೇಂದ್ರ ಜವಳಿ ಖಾತೆ ಸಚಿವರಾದ ಗಿರಿರಾಜ್ ಸಿಂಗ್, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ರಾಮನಾಥ್ ಠಾಕೂರ್, ಜಿಬುಟಿ ರಾಷ್ಟ್ರದ ಕೃಷಿ ಸಚಿವರಾದ ಮಹಮದ್ ಅಹಮದ್ ಅವಲ್ಹೆ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಲ್ಟಿಪ್ಲೆಕ್ಸ್ ಸಂಸ್ಥೆಯ ಸಂಸ್ಥಾಪಕರಾದ ಜಿ.ಪಿ.ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಶೆಟ್ಟಿ ಹಾಗೂ ಅವರ ಧರ್ಮಪತ್ನಿ ನಿಶ್ಚಿತಾ ಎಂ.ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧದ ಬೆಟ್ಟಿಂಗ್ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್…
ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಹಳ ಉತ್ಸಾಹದಿಂದ ಭಾಗಿಯಾಗಿದ್ದರು. ತಮಿಳುನಾಡಿನಲ್ಲಿ ಶೇ.82.24% ಮತದಾನ ದಾಖಲಾಗಿದ್ದು,…
ನಂಜನಗೂಡು: ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದರು…