ರಾಜ್ಯ

ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೃತರ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಪಾರದರ್ಶಕವಾಗಿ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನಾನು ಸಚಿನ್‌ ಕುಟುಂಬದವರಿಗೆ ಭರವಸೆ ನೀಡಿದ್ದೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.4) ಗುತ್ತಿಗೆದಾರ ಸಚಿನ್‌ ಪ್ರಕರಣವಾಗಿ ಬಿಜೆಪಿಯವರು ಮಾಡುತ್ತಿರುವ ಪ್ರತಿಭಟನೆ ಹಾಗು ಟೀಕಾರೋಪಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಹೇಳಿದಂತೆಲ್ಲಾ ಕುಣಿಯಲು ಸಾಧ್ಯವಿಲ್ಲ. ಅವರಿಗೆ ಸಿಬಿಐ ಮೇಲೆ ಯಾಕಷ್ಟು ಪ್ರೀತಿ ಎಂದು ತಿಳಿಯುತ್ತಿಲ್ಲ. ನಾವು ರಾಜ್ಯದಲ್ಲಿ ಸ್ಕ್ರಿಪ್ಟ್‌ ನಟನೆ ಮಾಡಲು ಆಗುವುದಿಲ್ಲ. ಒಂದು ಜೀವ ಹೋಗಿದೆ, ಅದಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ.

ಇನ್ನು ಬಿಜೆಪಿಯವರು, ಸಚಿನ್‌ ಕುಟುಂಬದವರಿಗೆ ನಮ್ಮ ಸರ್ಕಾರ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ರಾಜಕೀಯ ಬೆರೆಸುತ್ತಿರುವುದು ತಪ್ಪಲ್ಲವೇ? ಹೆಣ ಬಿದ್ದರೆ ಸಾಕು, ಬಿಜೆಪಿಯವರಿಗೆ ಸಂಭ್ರಮ ಅನ್ನಿಸುತ್ತದೆ. ಏನೇ ಆಗಲಿ ಸಚಿನ್‌ ಕುಟುಂಬಕ್ಕೆ ಪಾರದರ್ಶಕವಾಗಿ ನ್ಯಾಯ ಕೊಡಿಸುವ ಜವಾಬ್ದಾರಿ ಸರ್ಕಾರದ್ದು ಎಂದಿದ್ದಾರೆ.

ಕಲಬುರ್ಗಿಯಲ್ಲಿ ಸುಪಾರಿ ಮಾಡಿಕೊಂಡು ಬಂದಿಲ್ಲ ನಾವು. ಚಂದು ಪಾಟೀಲ ಯಾರು? ಸುಪಾರಿ ಕೊಡಲು ನಮಗೆ ಬೇರೆ ಕೆಲಸ ಇಲ್ಲವಾ? ಇತ್ತೀಚೆಗೆ ಬಿಜೆಪಿ ರಾಜಾಧ್ಯಕ್ಷರದ್ದು ಅತಿ ಆಗುತ್ತಿದೆ. ನಮ್ಮ ತಂದೆಯವರಿಗೆ ಗೌರವ ನೀಡಿ, ನಾನು ಸಮ್ಮನೆ ಇದ್ದೇನೆ ಅಷ್ಟೇ. ನಾವು ಬೀದಿಗೆ ಇಳಿದರೆ ನೀವು ಮನೆ ಸೇರಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago