ರಾಜ್ಯ

ಪಾರದರ್ಶಕ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೃತರ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಪಾರದರ್ಶಕವಾಗಿ ತನಿಖೆ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ನಾನು ಸಚಿನ್‌ ಕುಟುಂಬದವರಿಗೆ ಭರವಸೆ ನೀಡಿದ್ದೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.4) ಗುತ್ತಿಗೆದಾರ ಸಚಿನ್‌ ಪ್ರಕರಣವಾಗಿ ಬಿಜೆಪಿಯವರು ಮಾಡುತ್ತಿರುವ ಪ್ರತಿಭಟನೆ ಹಾಗು ಟೀಕಾರೋಪಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಹೇಳಿದಂತೆಲ್ಲಾ ಕುಣಿಯಲು ಸಾಧ್ಯವಿಲ್ಲ. ಅವರಿಗೆ ಸಿಬಿಐ ಮೇಲೆ ಯಾಕಷ್ಟು ಪ್ರೀತಿ ಎಂದು ತಿಳಿಯುತ್ತಿಲ್ಲ. ನಾವು ರಾಜ್ಯದಲ್ಲಿ ಸ್ಕ್ರಿಪ್ಟ್‌ ನಟನೆ ಮಾಡಲು ಆಗುವುದಿಲ್ಲ. ಒಂದು ಜೀವ ಹೋಗಿದೆ, ಅದಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ.

ಇನ್ನು ಬಿಜೆಪಿಯವರು, ಸಚಿನ್‌ ಕುಟುಂಬದವರಿಗೆ ನಮ್ಮ ಸರ್ಕಾರ ವಿರುದ್ಧ ಹೇಳಿಕೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ರಾಜಕೀಯ ಬೆರೆಸುತ್ತಿರುವುದು ತಪ್ಪಲ್ಲವೇ? ಹೆಣ ಬಿದ್ದರೆ ಸಾಕು, ಬಿಜೆಪಿಯವರಿಗೆ ಸಂಭ್ರಮ ಅನ್ನಿಸುತ್ತದೆ. ಏನೇ ಆಗಲಿ ಸಚಿನ್‌ ಕುಟುಂಬಕ್ಕೆ ಪಾರದರ್ಶಕವಾಗಿ ನ್ಯಾಯ ಕೊಡಿಸುವ ಜವಾಬ್ದಾರಿ ಸರ್ಕಾರದ್ದು ಎಂದಿದ್ದಾರೆ.

ಕಲಬುರ್ಗಿಯಲ್ಲಿ ಸುಪಾರಿ ಮಾಡಿಕೊಂಡು ಬಂದಿಲ್ಲ ನಾವು. ಚಂದು ಪಾಟೀಲ ಯಾರು? ಸುಪಾರಿ ಕೊಡಲು ನಮಗೆ ಬೇರೆ ಕೆಲಸ ಇಲ್ಲವಾ? ಇತ್ತೀಚೆಗೆ ಬಿಜೆಪಿ ರಾಜಾಧ್ಯಕ್ಷರದ್ದು ಅತಿ ಆಗುತ್ತಿದೆ. ನಮ್ಮ ತಂದೆಯವರಿಗೆ ಗೌರವ ನೀಡಿ, ನಾನು ಸಮ್ಮನೆ ಇದ್ದೇನೆ ಅಷ್ಟೇ. ನಾವು ಬೀದಿಗೆ ಇಳಿದರೆ ನೀವು ಮನೆ ಸೇರಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

2 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

3 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

9 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

9 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

10 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

10 hours ago