ಬೆಂಗಳೂರು : ಬಿಜೆಪಿಯವರುಮಾತಿಗೆ ಮುಂಚೆ ವರಿಷ್ಠರು ಅಂತಾರೆ. ಎಲ್ಲವನ್ನೂ ವರಿಷ್ಠರೇ ಮಾಡೋದಾದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾತಿಗೆ ಮುಂಚೆ ವರಿಷ್ಠರು ಅಂತಾರೆ. ಹಾಗಿದ್ರೆ ರಾಜ್ಯ ನಾಯಕರಿಗೆ ಬೆಲೆ ಇಲ್ವಾ? ಎಲ್ಲವನ್ನೂ ವರಿಷ್ಠರೇ ಮಾಡ್ತಾರೆ ಅಂದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಬಿಜೆಪಿಯವರೇ 50 ಜನ ಬರೋದಕ್ಕೆ ರೆಡಿ ಇದ್ದಾರೆ ನೆನಪಿಡಿ, ನಿಮ್ಮ ಎಲ್ಲ ಸಮಸ್ಯೆ ಸರಿಮಾಡಿಕೊಂಡು ಬೆಳಗಾವಿ ಅಧಿವೇಶನಕ್ಕೆ ಬರಲಿ ಎಂದು ಕುಟುಕಿದ್ದಾರೆ.
ಸಿಎಂ ಡಿಕೆಶಿ ಆಗುವುದಾದರೇ ಹೆಚ್ಡಿಕೆ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಚ್ಡಿಕೆ ಮತ್ತು ಜೆಡಿಎಸ್ ಬೆಂಬಲ ಕೇಳಿದ್ದು ಯಾರು? ಸಿಎಂ ಯಾರಾಗ್ತಾರೆ ಅನ್ನೋದನ್ನ ಕಟ್ಟಿಕೊಂಡು ಅವರಿಗೇನಾಗಬೇಕು? ಬಹುತೇಕ ಈಗಾಗಲೇ ಜೆಡಿಎಸ್-ಬಿಜೆಪಿ ವಿಲೀನ ಆಗಿದೆ. ನಮಗಂತೂ ಅವರ ಅವಶ್ಯಕತೆಯಿಲ್ಲ. ಅವರ ಅಸ್ತಿತ್ವಕ್ಕೆ ಏನು ಬೇಕಾದ್ರೂ ಹೇಳಿಕೊಳ್ಳಲಿ. ಜೆಡಿಎಸ್ ಬಳಿ ಯಾವುದೇ ವಿಷಯಗಳಿಲ್ಲ. ಮೊದಲು ಭ್ರಷ್ಟಾಚಾರ ವಿಚಾರ ಮಾತನಾಡಿದ್ರು. ಆಮೇಲೆ ಪೆನ್ಡ್ರೈವ್ ಅವರ ಜೇಬಿನಲ್ಲೇ ಉಳಿಯಿತು. ಮೊದಲು ಅವರ ಮನೆಯ ಗೊಂದಲಗಳನ್ನು ನಿವಾರಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.
ಪದೇ ಪದೇ ಕಲಬುರಗಿ ಜನ ಯಾಕೆ ಆರಿಸಿ ಕಳಿಸಿದ್ದಾರೆ? ಕೆಲಸ ಮಾಡದೇ ಜನ ಸುಮ್ಮನೆ ಆಯ್ಕೆ ಮಾಡಿ ಕಳುಹಿಸ್ತಾರಾ? ಜೆಡಿಎಸ್ನವರಿಗೆ ಕೇಳಿ ಜನರು ನಮಗೆ ವೋಟು ಹಾಕ್ತಾರಾ? ನಾನು ಏನೇನು ಮಾಡಿದ್ದೀನಿ ಅಂತ ಬೇಕಿದ್ದರೆ ಕುಮಾರಸ್ವಾಮಿನಾ ಕರೆದುಕೊಂಡು ಹೋಗಿ ತೋರಿಸ್ತೀನಿ. ಲೋಕಸಭೆ ಚುನಾವಣೆ ಮುಗಿದ ಬಳಿಕ ಬಿಜೆಪಿ-ಜೆಡಿಎಸ್ನಲ್ಲಿ ಯಾರೂ ಉಳಿಯಲ್ಲ. ಇನ್ನೂ 5 ತಿಂಗಳು ಟೈಂ ಕೊಡ್ತೀನಿ 50 ಜನ ಶಾಸಕರನ್ನ ಕರೆದುಕೊಂಡು ಹೋಗಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…