ರಾಜ್ಯ

ವರಿಷ್ಠರೇ ಎಲ್ಲಾ ಮಾಡೋದಾದ್ರೆ ನೀವೇನು ಬೆರಳು ಚೀಪ್ತಿದ್ರಾ : ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು : ಬಿಜೆಪಿಯವರುಮಾತಿಗೆ ಮುಂಚೆ ವರಿ‌ಷ್ಠರು ಅಂತಾರೆ. ಎಲ್ಲವನ್ನೂ ವರಿಷ್ಠರೇ ಮಾಡೋದಾದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾತಿಗೆ ಮುಂಚೆ ವರಿಷ್ಠರು ಅಂತಾರೆ. ಹಾಗಿದ್ರೆ ರಾಜ್ಯ ನಾಯಕರಿಗೆ ಬೆಲೆ ಇಲ್ವಾ? ಎಲ್ಲವನ್ನೂ ವರಿಷ್ಠರೇ ಮಾಡ್ತಾರೆ ಅಂದ್ರೆ ನೀವೇನು ಬೆರಳು ಚೀಪ್ತಾ ಇದ್ರಾ? ಬಿಜೆಪಿಯವರೇ 50 ಜನ ಬರೋದಕ್ಕೆ ರೆಡಿ ಇದ್ದಾರೆ ನೆನಪಿಡಿ, ನಿಮ್ಮ ಎಲ್ಲ ಸಮಸ್ಯೆ ಸರಿಮಾಡಿಕೊಂಡು ಬೆಳಗಾವಿ ಅಧಿವೇಶನಕ್ಕೆ ಬರಲಿ ಎಂದು ಕುಟುಕಿದ್ದಾರೆ.

ಸಿಎಂ ಡಿಕೆಶಿ ಆಗುವುದಾದರೇ ಹೆಚ್‌ಡಿಕೆ ಬೆಂಬಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಚ್‌ಡಿಕೆ ಮತ್ತು ಜೆಡಿಎಸ್ ಬೆಂಬಲ ಕೇಳಿದ್ದು ಯಾರು? ಸಿಎಂ ಯಾರಾಗ್ತಾರೆ ಅನ್ನೋದನ್ನ ಕಟ್ಟಿಕೊಂಡು ಅವರಿಗೇನಾಗಬೇಕು? ಬಹುತೇಕ ಈಗಾಗಲೇ ಜೆಡಿಎಸ್-ಬಿಜೆಪಿ ವಿಲೀನ ಆಗಿದೆ. ನಮಗಂತೂ ಅವರ ಅವಶ್ಯಕತೆಯಿಲ್ಲ. ಅವರ ಅಸ್ತಿತ್ವಕ್ಕೆ ಏನು ಬೇಕಾದ್ರೂ ಹೇಳಿಕೊಳ್ಳಲಿ. ಜೆಡಿಎಸ್ ಬಳಿ ಯಾವುದೇ ವಿಷಯಗಳಿಲ್ಲ. ಮೊದಲು ಭ್ರಷ್ಟಾಚಾರ ವಿಚಾರ ಮಾತನಾಡಿದ್ರು. ಆಮೇಲೆ ಪೆನ್‌ಡ್ರೈವ್‌ ಅವರ ಜೇಬಿನಲ್ಲೇ ಉಳಿಯಿತು. ಮೊದಲು ಅವರ ಮನೆಯ ಗೊಂದಲಗಳನ್ನು ನಿವಾರಿಸಿಕೊಳ್ಳಲಿ ಎಂದು ಟಾಂಗ್ ನೀಡಿದರು.

ಪದೇ ಪದೇ ಕಲಬುರಗಿ ಜನ ಯಾಕೆ ಆರಿಸಿ ಕಳಿಸಿದ್ದಾರೆ? ಕೆಲಸ ಮಾಡದೇ ಜನ ಸುಮ್ಮನೆ ಆಯ್ಕೆ ಮಾಡಿ ಕಳುಹಿಸ್ತಾರಾ? ಜೆಡಿಎಸ್‌ನವರಿಗೆ ಕೇಳಿ ಜನರು ನಮಗೆ ವೋಟು ಹಾಕ್ತಾರಾ? ನಾನು ಏನೇನು ಮಾಡಿದ್ದೀನಿ ಅಂತ ಬೇಕಿದ್ದರೆ ಕುಮಾರಸ್ವಾಮಿನಾ ಕರೆದುಕೊಂಡು ಹೋಗಿ ತೋರಿಸ್ತೀನಿ. ಲೋಕಸಭೆ ಚುನಾವಣೆ ಮುಗಿದ ಬಳಿಕ ಬಿಜೆಪಿ-ಜೆಡಿಎಸ್‌ನಲ್ಲಿ ಯಾರೂ ಉಳಿಯಲ್ಲ. ಇನ್ನೂ 5 ತಿಂಗಳು ಟೈಂ ಕೊಡ್ತೀನಿ 50 ಜನ ಶಾಸಕರನ್ನ ಕರೆದುಕೊಂಡು ಹೋಗಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.

lokesh

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

6 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

19 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

19 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

19 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

19 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

19 hours ago