ರಾಜ್ಯ

ರಾಜಕೀಯದಲ್ಲಿ ಪ್ರಿಯಾಂಕ್ ಖರ್ಗೆ ಇನ್ನೂ ಕಣ್ಣುಬಿಟ್ಟಿಲ್ಲ ನಾನು ಸಿಎಂ ಅಂತಾರೆ : ಈಶ್ವರಪ್ಪ

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ನವರ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್‌ ಖರ್ಗೆ ಅವರಪ್ಪನ ಹೆಸರು ಹೇಳಿದ್ರೇ ಒಪ್ಪಿಕೊಳ್ಳುತ್ತಿದ್ದೆ. ಆದ್ರೇ ಮಗ ನಾನೇ ಸಿಎಂ ಅಂತಾನೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಗಲು ಬಿಟ್ಟಿಲ್ಲ. ಇನ್ನೂ ಇವರನ್ನು ಬಿಡ್ತಾರಾ? ಸತೀಶ್ ಜಾರಕಿಹೊಳಿ ಸಹ ಸಿಎಂ ರೇಸ್‌ನಲ್ಲಿದ್ದಾರೆ ಎನ್ನುತ್ತಾರೆ. ಇನ್ನೂ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಲಿ ಎಂದು ರಾಜಣ್ಣ ಹೇಳ್ತಾರೆ. ಪರಮೇಶ್ವರ್ ದೇವರ ಅನುಗ್ರಹ ಇದ್ರೇ ಸಿಎಂ ಆಗ್ತೇನೆ ಎನ್ನುತ್ತಾರೆ. ದೇವರನ್ನು ಬೈಯೋ ಕಾಂಗ್ರೆಸ್‌ನವರು ಇದೀಗ ದೇವರು ದೇವರು ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ತಿದ್ದುಪಡಿ ಮಾಡಿ ಜಾತಿಗೊಂದು ಸಿಎಂ ಮಾಡಲಿ. ಪರಮೇಶ್ವರ್ ಮತ್ತು ಖರ್ಗೆಗಾಗಿ ಅದೊಂದು ಜಾತಿಗೆ ಎರಡು ಸಿಎಂ ಕೊಡಲಿ ನಮ್ಮ ಅಭ್ಯಂತರವಿಲ್ಲ. ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ ಅಂತಿದ್ದ ಸಿದ್ದರಾಮಯ್ಯ ಸಹ ಇಂದು ನಾನೇ ಮುಖ್ಯಮಂತ್ರಿ ನಾನೇ ಮುಖ್ಯಮಂತ್ರಿ ಎನ್ನುತ್ತಾರೆ. ನಂತರ ಉಲ್ಟಾ ಹೊಡೆಯುತ್ತಾರೆ. ಅದೇನು ನಮ್ಮಪ್ಪನ ಆಸ್ತಿನಾ? ನಮ್ಮಪ್ಪ ಗೂಟ ಹೊಡೆದುಕೊಂಡು ಕೂತ್ಕೊಳ್ಳಲು? ಕೇಂದ್ರದ ಒಂದು ಪಾರ್ಟಿ ಇದೆ ಹೈಕಮಾಂಡ್ ಒಪ್ಪಿಗೆ ಕೊಟ್ರೇ ಆಯ್ತಪ್ಪ ಎಂದು ಗುಡುಗಿದ್ದಾರೆ.

 

lokesh

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

6 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

6 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

7 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago