ರಾಜ್ಯ

ರಾಜಕೀಯದಲ್ಲಿ ಪ್ರಿಯಾಂಕ್ ಖರ್ಗೆ ಇನ್ನೂ ಕಣ್ಣುಬಿಟ್ಟಿಲ್ಲ ನಾನು ಸಿಎಂ ಅಂತಾರೆ : ಈಶ್ವರಪ್ಪ

ಬಳ್ಳಾರಿ : ಕಾಂಗ್ರೆಸ್‌ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ನವರ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್‌ ಖರ್ಗೆ ಅವರಪ್ಪನ ಹೆಸರು ಹೇಳಿದ್ರೇ ಒಪ್ಪಿಕೊಳ್ಳುತ್ತಿದ್ದೆ. ಆದ್ರೇ ಮಗ ನಾನೇ ಸಿಎಂ ಅಂತಾನೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಗಲು ಬಿಟ್ಟಿಲ್ಲ. ಇನ್ನೂ ಇವರನ್ನು ಬಿಡ್ತಾರಾ? ಸತೀಶ್ ಜಾರಕಿಹೊಳಿ ಸಹ ಸಿಎಂ ರೇಸ್‌ನಲ್ಲಿದ್ದಾರೆ ಎನ್ನುತ್ತಾರೆ. ಇನ್ನೂ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಲಿ ಎಂದು ರಾಜಣ್ಣ ಹೇಳ್ತಾರೆ. ಪರಮೇಶ್ವರ್ ದೇವರ ಅನುಗ್ರಹ ಇದ್ರೇ ಸಿಎಂ ಆಗ್ತೇನೆ ಎನ್ನುತ್ತಾರೆ. ದೇವರನ್ನು ಬೈಯೋ ಕಾಂಗ್ರೆಸ್‌ನವರು ಇದೀಗ ದೇವರು ದೇವರು ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ತಿದ್ದುಪಡಿ ಮಾಡಿ ಜಾತಿಗೊಂದು ಸಿಎಂ ಮಾಡಲಿ. ಪರಮೇಶ್ವರ್ ಮತ್ತು ಖರ್ಗೆಗಾಗಿ ಅದೊಂದು ಜಾತಿಗೆ ಎರಡು ಸಿಎಂ ಕೊಡಲಿ ನಮ್ಮ ಅಭ್ಯಂತರವಿಲ್ಲ. ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ ಅಂತಿದ್ದ ಸಿದ್ದರಾಮಯ್ಯ ಸಹ ಇಂದು ನಾನೇ ಮುಖ್ಯಮಂತ್ರಿ ನಾನೇ ಮುಖ್ಯಮಂತ್ರಿ ಎನ್ನುತ್ತಾರೆ. ನಂತರ ಉಲ್ಟಾ ಹೊಡೆಯುತ್ತಾರೆ. ಅದೇನು ನಮ್ಮಪ್ಪನ ಆಸ್ತಿನಾ? ನಮ್ಮಪ್ಪ ಗೂಟ ಹೊಡೆದುಕೊಂಡು ಕೂತ್ಕೊಳ್ಳಲು? ಕೇಂದ್ರದ ಒಂದು ಪಾರ್ಟಿ ಇದೆ ಹೈಕಮಾಂಡ್ ಒಪ್ಪಿಗೆ ಕೊಟ್ರೇ ಆಯ್ತಪ್ಪ ಎಂದು ಗುಡುಗಿದ್ದಾರೆ.

 

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago