ಬಳ್ಳಾರಿ : ಕಾಂಗ್ರೆಸ್ನಲ್ಲಿ ಎಲ್ಲರೂ ಮುಖ್ಯಮಂತ್ರಿಯಾಗುವವರೇ? ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ ಎಂದು 224 ಜನರು ಹೇಳ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಇನ್ನೂ ರಾಜಕಾರಣದಲ್ಲಿ ಕಣ್ಣು ಬಿಟ್ಟಿಲ್ಲ, ನಾನು ಸಿಎಂ ಅನ್ನುತ್ತಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನವರ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಅವರಪ್ಪನ ಹೆಸರು ಹೇಳಿದ್ರೇ ಒಪ್ಪಿಕೊಳ್ಳುತ್ತಿದ್ದೆ. ಆದ್ರೇ ಮಗ ನಾನೇ ಸಿಎಂ ಅಂತಾನೆ. ಕಾಂಗ್ರೆಸ್ನಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಗಲು ಬಿಟ್ಟಿಲ್ಲ. ಇನ್ನೂ ಇವರನ್ನು ಬಿಡ್ತಾರಾ? ಸತೀಶ್ ಜಾರಕಿಹೊಳಿ ಸಹ ಸಿಎಂ ರೇಸ್ನಲ್ಲಿದ್ದಾರೆ ಎನ್ನುತ್ತಾರೆ. ಇನ್ನೂ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯಾಗಲಿ ಎಂದು ರಾಜಣ್ಣ ಹೇಳ್ತಾರೆ. ಪರಮೇಶ್ವರ್ ದೇವರ ಅನುಗ್ರಹ ಇದ್ರೇ ಸಿಎಂ ಆಗ್ತೇನೆ ಎನ್ನುತ್ತಾರೆ. ದೇವರನ್ನು ಬೈಯೋ ಕಾಂಗ್ರೆಸ್ನವರು ಇದೀಗ ದೇವರು ದೇವರು ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂವಿಧಾನ ತಿದ್ದುಪಡಿ ಮಾಡಿ ಜಾತಿಗೊಂದು ಸಿಎಂ ಮಾಡಲಿ. ಪರಮೇಶ್ವರ್ ಮತ್ತು ಖರ್ಗೆಗಾಗಿ ಅದೊಂದು ಜಾತಿಗೆ ಎರಡು ಸಿಎಂ ಕೊಡಲಿ ನಮ್ಮ ಅಭ್ಯಂತರವಿಲ್ಲ. ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ ಅಂತಿದ್ದ ಸಿದ್ದರಾಮಯ್ಯ ಸಹ ಇಂದು ನಾನೇ ಮುಖ್ಯಮಂತ್ರಿ ನಾನೇ ಮುಖ್ಯಮಂತ್ರಿ ಎನ್ನುತ್ತಾರೆ. ನಂತರ ಉಲ್ಟಾ ಹೊಡೆಯುತ್ತಾರೆ. ಅದೇನು ನಮ್ಮಪ್ಪನ ಆಸ್ತಿನಾ? ನಮ್ಮಪ್ಪ ಗೂಟ ಹೊಡೆದುಕೊಂಡು ಕೂತ್ಕೊಳ್ಳಲು? ಕೇಂದ್ರದ ಒಂದು ಪಾರ್ಟಿ ಇದೆ ಹೈಕಮಾಂಡ್ ಒಪ್ಪಿಗೆ ಕೊಟ್ರೇ ಆಯ್ತಪ್ಪ ಎಂದು ಗುಡುಗಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…