ನವದೆಹಲಿ: ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಕೇಂದ್ರಗಳ ಮಹತ್ವದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಜಾಲಹಳ್ಳಿಯ ಎಚ್ಎಂಟಿ ಕ್ಯಾಂಪಸ್ನಲ್ಲಿ ಹೆಚ್ಚುವರಿ ಶೆಡ್ಗಳನ್ನು ಮಂಜೂರು ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿಂದು (ಜೂನ್.29) ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಸಹಯೋಗದಲ್ಲಿ ಸ್ಥಾಪಿಸಲಾದ ಸೆಂಟರ್ ಆಫ್ ಎಕ್ಸಲೆನ್ಸ್-ಆರ್ಟಿಪಾರ್ಕ್ಗೆ ಜಾಲಹಳ್ಳಿಯ ಎಚ್ಎಂಟಿ ಕ್ಯಾಂಪಸ್ನಲ್ಲಿರುವ ಒಂದು ಕೈಗಾರಿಕಾ ಶೆಡ್ ಅನ್ನು ಗುತ್ತಿಗೆಗೆ ನೀಡಲಾಗಿದೆ. ಖಾಲಿ ಇರುವ ಎರಡು ಶೆಡ್ಗಳನ್ನು ಎಲೆಕ್ಟ್ರಾನಿಕ್ಸ್, ಐಟಿ ಬಿಟಿ ಇಲಾಖೆಗೆ ದೀರ್ಘಾವಧಿಗೆ ಗುತ್ತಿಗೆ ನೀಡುವಂತೆ ಎಚ್ಡಿ ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದರು.
ಜಾಗತಿಕವಾಗಿ ವಿವಿಧ ಹೈಟೆಕ್ ಡೊಮೇನ್ಗಳಲ್ಲಿ ಕರ್ನಾಟಕವನ್ನು ಮುಂಚೂಣಿಯಲ್ಲಿರಿಸುವ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆಗೆ ನೆರವಾಗುವ ಕುರಿತು ಪ್ರಸ್ತಾಪಿಸಿದರು. ಹೆಚ್ಚು ಟೆಕ್ ಸಂಸ್ಥೆಗಳ ಸ್ಥಾಪನೆ ಮೂಲಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕೆಂದು ಮನವಿ ಮಾಡಿದರು.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…