ನವದೆಹಲಿ: ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಕೇಂದ್ರಗಳ ಮಹತ್ವದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಜಾಲಹಳ್ಳಿಯ ಎಚ್ಎಂಟಿ ಕ್ಯಾಂಪಸ್ನಲ್ಲಿ ಹೆಚ್ಚುವರಿ ಶೆಡ್ಗಳನ್ನು ಮಂಜೂರು ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿಂದು (ಜೂನ್.29) ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಸಹಯೋಗದಲ್ಲಿ ಸ್ಥಾಪಿಸಲಾದ ಸೆಂಟರ್ ಆಫ್ ಎಕ್ಸಲೆನ್ಸ್-ಆರ್ಟಿಪಾರ್ಕ್ಗೆ ಜಾಲಹಳ್ಳಿಯ ಎಚ್ಎಂಟಿ ಕ್ಯಾಂಪಸ್ನಲ್ಲಿರುವ ಒಂದು ಕೈಗಾರಿಕಾ ಶೆಡ್ ಅನ್ನು ಗುತ್ತಿಗೆಗೆ ನೀಡಲಾಗಿದೆ. ಖಾಲಿ ಇರುವ ಎರಡು ಶೆಡ್ಗಳನ್ನು ಎಲೆಕ್ಟ್ರಾನಿಕ್ಸ್, ಐಟಿ ಬಿಟಿ ಇಲಾಖೆಗೆ ದೀರ್ಘಾವಧಿಗೆ ಗುತ್ತಿಗೆ ನೀಡುವಂತೆ ಎಚ್ಡಿ ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದರು.
ಜಾಗತಿಕವಾಗಿ ವಿವಿಧ ಹೈಟೆಕ್ ಡೊಮೇನ್ಗಳಲ್ಲಿ ಕರ್ನಾಟಕವನ್ನು ಮುಂಚೂಣಿಯಲ್ಲಿರಿಸುವ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆಗೆ ನೆರವಾಗುವ ಕುರಿತು ಪ್ರಸ್ತಾಪಿಸಿದರು. ಹೆಚ್ಚು ಟೆಕ್ ಸಂಸ್ಥೆಗಳ ಸ್ಥಾಪನೆ ಮೂಲಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕೆಂದು ಮನವಿ ಮಾಡಿದರು.
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…