ರಾಜ್ಯ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭೇಟಿಯಾದ ಪ್ರಿಯಾಂಕ್‌ ಖರ್ಗೆ: ಕಾರಣ ಇಲ್ಲಿದೆ?

ನವದೆಹಲಿ: ರಾಜ್ಯದಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಉತ್ಕೃಷ್ಟತೆಯ ಕೇಂದ್ರಗಳ ಮಹತ್ವದ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿ ಹೆಚ್ಚುವರಿ ಶೆಡ್‌ಗಳನ್ನು ಮಂಜೂರು ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿಂದು (ಜೂನ್‌.29) ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.

ಬೆಂಗಳೂರಿನ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಸಹಯೋಗದಲ್ಲಿ ಸ್ಥಾಪಿಸಲಾದ ಸೆಂಟರ್ ಆಫ್ ಎಕ್ಸಲೆನ್ಸ್-ಆರ್‌ಟಿಪಾರ್ಕ್‌ಗೆ ಜಾಲಹಳ್ಳಿಯ ಎಚ್‌ಎಂಟಿ ಕ್ಯಾಂಪಸ್‌ನಲ್ಲಿರುವ ಒಂದು ಕೈಗಾರಿಕಾ ಶೆಡ್ ಅನ್ನು ಗುತ್ತಿಗೆಗೆ ನೀಡಲಾಗಿದೆ. ಖಾಲಿ ಇರುವ ಎರಡು ಶೆಡ್‌ಗಳನ್ನು ಎಲೆಕ್ಟ್ರಾನಿಕ್ಸ್, ಐಟಿ ಬಿಟಿ ಇಲಾಖೆಗೆ ದೀರ್ಘಾವಧಿಗೆ ಗುತ್ತಿಗೆ ನೀಡುವಂತೆ ಎಚ್‌ಡಿ ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದರು.

ಜಾಗತಿಕವಾಗಿ ವಿವಿಧ ಹೈಟೆಕ್ ಡೊಮೇನ್‌ಗಳಲ್ಲಿ ಕರ್ನಾಟಕವನ್ನು ಮುಂಚೂಣಿಯಲ್ಲಿರಿಸುವ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆಗೆ ನೆರವಾಗುವ ಕುರಿತು ಪ್ರಸ್ತಾಪಿಸಿದರು. ಹೆಚ್ಚು ಟೆಕ್ ಸಂಸ್ಥೆಗಳ ಸ್ಥಾಪನೆ ಮೂಲಕ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕೆಂದು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

13 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

14 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

14 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

14 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago