ರಾಜ್ಯ

ನ್ಯಾಯಾಲಯದಲ್ಲಿ ಪಿಡಿಒಗಳ ಮುಂಬಡ್ತಿ ವಿಚಾರ ಇತ್ಯರ್ಥವಾದ ಮೇಲೆ ಸೂಕ್ತ ತೀರ್ಮಾನ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನ್ಯಾಯಾಲಯದಲ್ಲಿ ಪಿಡಿಒ ಅಧಿಕಾರಿಗಳ ಮುಂಬಡ್ತಿಯ ವಿಚಾರ ಇತ್ಯರ್ಥವಾದ ಮೇಲೆಯೇ ಇದರ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಶ್ವಾಸನೆ ನೀಡಿದ್ದಾರೆ.

ವಿಧಾನಪರಿಷತ್‌ನಲ್ಲಿ ಇಂದು(ಮಾರ್ಚ್.‌14) ಬಿಜೆಪಿ ಎಂಎಲ್‌ಸಿ ಚಿದಾನಂದಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಿಡಿಒಗಳಿಗೆ 10 ರಿಂದ 11 ವರ್ಷಗಳ ಕಾಲ ಮುಂಬಡ್ತಿ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನ್ಯಾಯಾಲಯದಲ್ಲಿ ಈ ಬಗ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿರುವುದರಿಂದ ನಾವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ. ರಿಟ್ ಅರ್ಜಿ ಇತ್ಯರ್ಥವಾದ ತಕ್ಷಣವೇ ಮುಂಬಡ್ತಿ ನೀಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಭರವಸೆ ನೀಡಿದ್ದಾರೆ.

ರಾಜ್ಯದ ಕೆಲವು ಕಡೆಗಳಲ್ಲಿ 2-3 ಗ್ರಾಮ ಪಂಚಾಯಿತಿಗಳನ್ನು ಒಬ್ಬ ಪಿಡಿಒ ಅಧಿಕಾರಿಯೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಕಾರ್ಯ ನಿರ್ವಹಣೆಯನ್ನು ಸಮಪರ್ಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಆದರೆ ಮುಂಬಡ್ತಿ ನೀಡಲು ರಾಜ್ಯ ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಕೆಪಿಎಸ್‌ಸಿ ಮೂಲಕ 247 ಪಿಡಿಒ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸುವಂತೆ ಅಲ್ಲಿನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಪರೀಕ್ಷೆ ನಡೆದು ಎರಡೂವರೆ ತಿಂಗಳು ಆಗಿರುವುದರಿಂದ ಯಾಕೆ ವಿಳಂವಾಗುತ್ತಿದೆ ಎಂದು ಕೂಡ ಪ್ರಶ್ನಿಸಿದ್ದೇನೆ. ಹೀಗಾಗಿ ಕೆಪಿಎಸ್‌ಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಬಳಿಕವೇ 247 ಹುದ್ದೆಗಳು ಲಭ್ಯವಾಗಲಿವೆ. ಆ ನಂತರ ಒಬ್ಬರಿಗೆ ಒಂದೇ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

2 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

4 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

4 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

4 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

4 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

4 hours ago