ರಾಜ್ಯ

ನ್ಯಾಯಾಲಯದಲ್ಲಿ ಪಿಡಿಒಗಳ ಮುಂಬಡ್ತಿ ವಿಚಾರ ಇತ್ಯರ್ಥವಾದ ಮೇಲೆ ಸೂಕ್ತ ತೀರ್ಮಾನ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನ್ಯಾಯಾಲಯದಲ್ಲಿ ಪಿಡಿಒ ಅಧಿಕಾರಿಗಳ ಮುಂಬಡ್ತಿಯ ವಿಚಾರ ಇತ್ಯರ್ಥವಾದ ಮೇಲೆಯೇ ಇದರ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಶ್ವಾಸನೆ ನೀಡಿದ್ದಾರೆ.

ವಿಧಾನಪರಿಷತ್‌ನಲ್ಲಿ ಇಂದು(ಮಾರ್ಚ್.‌14) ಬಿಜೆಪಿ ಎಂಎಲ್‌ಸಿ ಚಿದಾನಂದಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಿಡಿಒಗಳಿಗೆ 10 ರಿಂದ 11 ವರ್ಷಗಳ ಕಾಲ ಮುಂಬಡ್ತಿ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ನ್ಯಾಯಾಲಯದಲ್ಲಿ ಈ ಬಗ್ಗೆ ರಿಟ್ ಅರ್ಜಿ ಸಲ್ಲಿಕೆಯಾಗಿರುವುದರಿಂದ ನಾವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ. ರಿಟ್ ಅರ್ಜಿ ಇತ್ಯರ್ಥವಾದ ತಕ್ಷಣವೇ ಮುಂಬಡ್ತಿ ನೀಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಭರವಸೆ ನೀಡಿದ್ದಾರೆ.

ರಾಜ್ಯದ ಕೆಲವು ಕಡೆಗಳಲ್ಲಿ 2-3 ಗ್ರಾಮ ಪಂಚಾಯಿತಿಗಳನ್ನು ಒಬ್ಬ ಪಿಡಿಒ ಅಧಿಕಾರಿಯೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ ಕಾರ್ಯ ನಿರ್ವಹಣೆಯನ್ನು ಸಮಪರ್ಕವಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಆದರೆ ಮುಂಬಡ್ತಿ ನೀಡಲು ರಾಜ್ಯ ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಕೆಪಿಎಸ್‌ಸಿ ಮೂಲಕ 247 ಪಿಡಿಒ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪಟ್ಟಿಯನ್ನು ಆದಷ್ಟು ಬೇಗ ಪ್ರಕಟಿಸುವಂತೆ ಅಲ್ಲಿನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ಪರೀಕ್ಷೆ ನಡೆದು ಎರಡೂವರೆ ತಿಂಗಳು ಆಗಿರುವುದರಿಂದ ಯಾಕೆ ವಿಳಂವಾಗುತ್ತಿದೆ ಎಂದು ಕೂಡ ಪ್ರಶ್ನಿಸಿದ್ದೇನೆ. ಹೀಗಾಗಿ ಕೆಪಿಎಸ್‌ಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಿದ ಬಳಿಕವೇ 247 ಹುದ್ದೆಗಳು ಲಭ್ಯವಾಗಲಿವೆ. ಆ ನಂತರ ಒಬ್ಬರಿಗೆ ಒಂದೇ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago