ರಾಜ್ಯ

ಅಮಿತ್‌ ಶಾ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ| ಬಿಜೆಪಿಯವರು 12ನೇ ಶತಮಾನದಲ್ಲಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟುತ್ತಿದ್ದರು: ಪ್ರಿಯಾಂಕ್‌ಖರ್ಗೆ

ಬೆಂಗಳೂರು: ಕೇಂದ್ರ ಸಚಿವ ಅಮಿತ್‌ ಶಾ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದು ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ ಎಂದು ಪ್ರಿಯಾಂಕ್‌ಖರ್ಗೆ ವಾಗ್ದಾಳಿ ನಡೆಸಿದ್ದಾರೆ

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿಯಾಗಿದೆ. ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೊ ಏನೋ?
ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ ಎಂದು ತಿಳಿಸಿದ್ದಾರೆ.

ಬಿಜೆಪಿ ಪಕ್ಷದವರಿಗೆ, ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?
ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ?, ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ. ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?, ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ?, ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?, ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ? ಎಂದು ಪ್ರಶ್ನಿಸಿದ್ದಾರೆ.

ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ. ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ. ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ ಎಂದಿದ್ದಾರೆ.

ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ. ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ. ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ. ಕರ್ಮ ಮತ್ತು
ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ತಿಳಿಸಿರುವುದು ಎಂದು ಹೇಳಿದರು.

ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಅವರು ಮಾಡಿರುವ ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

9 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

44 mins ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

1 hour ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

20 hours ago