ರಾಜ್ಯ

ಸಿಎಂ, ಡಿಸಿಎಂ ಹೇಳಿರುವುದನ್ನೇ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿರುವುದನ್ನೇ ನಿನ್ನೆ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ ಅಷ್ಟೇ. ಯಾರ ಬಾಯಿಗೂ ಹಾಕಲು ಸಾಧ್ಯವಿಲ್ಲ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.18) ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಸರ್ಕಾರದಲ್ಲಿ ಎಲ್ಲರೂ ಬಹಿರಂಗ ಹೇಳಿಕೆ ನೀಡದೇ ಪಕ್ಷ ಮತ್ತು ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂದು ಹೇಳಿದ್ದರು. ನಿನ್ನೆ ಅದನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ ಅಷ್ಟೇ. ನಾವು ಹೇಳಿಕೆಗಳನ್ನು ನೀಡುವಾಗ ವಿವೇಚನೆ ಬಳಸಿ ಹೇಳಿಕೆಗಳನ್ನು ನೀಡಬೇಕು. ಬಹಿರಂಗ ಮಾತಿನಿಂದ ಪಕ್ಷಕ್ಕೆ ಹಾನಿ ಆಗುತ್ತೊ ಅಥವಾ ಇಲ್ಲವಾ ಎಂಬುದನ್ನು ಯೋಚಿಸಬೇಕು. ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆಯಂತೆ ಅವರವರ ಮಾತಿನ ಸೂಕ್ಷ್ಮತೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದರು.

ಪಕ್ಷದಲ್ಲಿ ಅಧಿಕಾರ ಸಿಕ್ಕ ಮೇಲೆ ಕಾಂಗ್ರೆಸ್‌ ಪಕ್ಷ ಯಾವುದು? ಎಐಸಿಸಿ ಅಧ್ಯಕ್ಷರು ಯಾರು? ರಾಹುಲ್‌ ಗಾಂಧಿ ಯಾರು? ಅಥವಾ ಹೈಕಮಾಂಡ್‌ ಏನು ಮಾಡುತ್ತೇ ಎನ್ನುವುದು ಸರಿಯಲ್ಲ. ಈಗಾಗಲೇ ಸಿಎಂ, ಡಿಸಿಎಂ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂದೇಶ ನೀಡಿದ್ದಾರೆ. ಆ ಸೂಚನೆ ಮೇರೆಗೆ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

ಮುಡಾ ಹಗರಣದಲ್ಲಿ ಬಿಜೆಪಿಯವರು ಆಳಕ್ಕೆ ಹೋದಷ್ಟೂ ಅವರಿಗೆ ಅವಮಾನ

ಮುಡಾ ಹಗರಣದ ಬಗ್ಗೆ ಇ.ಡಿ.ನೀಡಿರುವ ವರದಿ ಆಧಾರಿಸಿ ಬಿಜೆಪಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಕಳೆದ 10-15 ವರ್ಷಗಳಿಂದ ಎಲ್ಲಾ ಹರ್ಬನ್‌ ಡೆವಲಪ್‌ಮೆಂಟ್‌ಗಳಲ್ಲೂ ಐಟಿ ಮತ್ತು ಇ.ಡಿ. ಅವರಿಗೆ ತನಿಖೆ ಮಾಡಿ ಎಂದೇ ಹೇಳುತ್ತಿದ್ದೇವೆ. ಆದರೆ ಬಿಜೆಪಿಯವರು ಮುಡಾ ಹಗರಣದಲ್ಲಿ, ಕಿಯಾನಿಕ್ಸ್ ಸೇರಿದಂತೆ ಬೇರೆ ಯಾವ ಪ್ರಕರಣದಲ್ಲೂ ಆಳಕ್ಕೆ ಹೋದಷ್ಟು ಅವರೇ ಅವಮಾನ ಅನುಭವಿಸುತ್ತಾರೆ. ಅಲ್ಲದೇ ಅವರೇ ಮೂಗು ಕೂಯ್ದೂಕೊಳ್ಳುತ್ತಾರೆ. ಮೊನ್ನೆ ಕಿಯಾನಿಕ್ಸ್‌ ಹಗರಣದಲ್ಲಿ ಏನಾಯ್ತು? ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯಾವ ಐಟಿ, ಇ.ಟಿ. ಬೇಕಾದರೂ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ಅದರಂತೆಯೇ ಅವರ ಕಾಲದಲ್ಲಾದ ಹಗರಣಗಳು ಸಹ ಪತ್ತೆಯಾಗಿ ಬೆಳಕಿಗೆ ಬರುತ್ತವೆ.

ಇದೇ ಸಂದರ್ಭದಲ್ಲಿ ಡಿನ್ನರ್‌ ಪಾರ್ಟಿ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅವರು ಮೊದಲು ಕಾಂಗ್ರೆಸ್‌ ಬಗ್ಗೆ ಮಾತನಾಡುವುದನ್ನು ಬಿಟ್ಟು, ಅವರ ಪಕ್ಷದಲ್ಲಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ಗಮನಹರಿಸಬೇಕು. ಅವರೇ ಅಧಿಕೃತವಾಗಿ ಫೆಬ್ರವರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗುತ್ತಾರೆ ಎಂದಿದ್ದಾರೆ. ಅಲ್ಲದೇ ಆ ಪಕ್ಷದಲ್ಲಿಯೇ ಯಾರ ನೇತೃತ್ವದಲ್ಲಿ ಪಕ್ಷವನ್ನು ಹಾಳು ಮಾಡಬೇಕೆಂದು ತಯಾರಿ ನಡೆಸುತ್ತಿದ್ದಾರೆ. ಆದರೆ ನಮ್ಮ ಪಕ್ಷದಲ್ಲಿ ಇಂತಹ ಯಾವುದೇ ಆಲೋಚನೆಗಳಾಗಲಿ ಅಥವಾ ಗೊಂದಲಗಳಾಗಲಿ ಇಲ್ಲ ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

8 hours ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

11 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

12 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

12 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

12 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

12 hours ago