ರಾಜ್ಯ

ಸಿಎಂ, ಡಿಸಿಎಂ ಹೇಳಿರುವುದನ್ನೇ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿರುವುದನ್ನೇ ನಿನ್ನೆ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ ಅಷ್ಟೇ. ಯಾರ ಬಾಯಿಗೂ ಹಾಕಲು ಸಾಧ್ಯವಿಲ್ಲ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.18) ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಸರ್ಕಾರದಲ್ಲಿ ಎಲ್ಲರೂ ಬಹಿರಂಗ ಹೇಳಿಕೆ ನೀಡದೇ ಪಕ್ಷ ಮತ್ತು ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂದು ಹೇಳಿದ್ದರು. ನಿನ್ನೆ ಅದನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ ಅಷ್ಟೇ. ನಾವು ಹೇಳಿಕೆಗಳನ್ನು ನೀಡುವಾಗ ವಿವೇಚನೆ ಬಳಸಿ ಹೇಳಿಕೆಗಳನ್ನು ನೀಡಬೇಕು. ಬಹಿರಂಗ ಮಾತಿನಿಂದ ಪಕ್ಷಕ್ಕೆ ಹಾನಿ ಆಗುತ್ತೊ ಅಥವಾ ಇಲ್ಲವಾ ಎಂಬುದನ್ನು ಯೋಚಿಸಬೇಕು. ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆಯಂತೆ ಅವರವರ ಮಾತಿನ ಸೂಕ್ಷ್ಮತೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದರು.

ಪಕ್ಷದಲ್ಲಿ ಅಧಿಕಾರ ಸಿಕ್ಕ ಮೇಲೆ ಕಾಂಗ್ರೆಸ್‌ ಪಕ್ಷ ಯಾವುದು? ಎಐಸಿಸಿ ಅಧ್ಯಕ್ಷರು ಯಾರು? ರಾಹುಲ್‌ ಗಾಂಧಿ ಯಾರು? ಅಥವಾ ಹೈಕಮಾಂಡ್‌ ಏನು ಮಾಡುತ್ತೇ ಎನ್ನುವುದು ಸರಿಯಲ್ಲ. ಈಗಾಗಲೇ ಸಿಎಂ, ಡಿಸಿಎಂ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂದೇಶ ನೀಡಿದ್ದಾರೆ. ಆ ಸೂಚನೆ ಮೇರೆಗೆ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

ಮುಡಾ ಹಗರಣದಲ್ಲಿ ಬಿಜೆಪಿಯವರು ಆಳಕ್ಕೆ ಹೋದಷ್ಟೂ ಅವರಿಗೆ ಅವಮಾನ

ಮುಡಾ ಹಗರಣದ ಬಗ್ಗೆ ಇ.ಡಿ.ನೀಡಿರುವ ವರದಿ ಆಧಾರಿಸಿ ಬಿಜೆಪಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಕಳೆದ 10-15 ವರ್ಷಗಳಿಂದ ಎಲ್ಲಾ ಹರ್ಬನ್‌ ಡೆವಲಪ್‌ಮೆಂಟ್‌ಗಳಲ್ಲೂ ಐಟಿ ಮತ್ತು ಇ.ಡಿ. ಅವರಿಗೆ ತನಿಖೆ ಮಾಡಿ ಎಂದೇ ಹೇಳುತ್ತಿದ್ದೇವೆ. ಆದರೆ ಬಿಜೆಪಿಯವರು ಮುಡಾ ಹಗರಣದಲ್ಲಿ, ಕಿಯಾನಿಕ್ಸ್ ಸೇರಿದಂತೆ ಬೇರೆ ಯಾವ ಪ್ರಕರಣದಲ್ಲೂ ಆಳಕ್ಕೆ ಹೋದಷ್ಟು ಅವರೇ ಅವಮಾನ ಅನುಭವಿಸುತ್ತಾರೆ. ಅಲ್ಲದೇ ಅವರೇ ಮೂಗು ಕೂಯ್ದೂಕೊಳ್ಳುತ್ತಾರೆ. ಮೊನ್ನೆ ಕಿಯಾನಿಕ್ಸ್‌ ಹಗರಣದಲ್ಲಿ ಏನಾಯ್ತು? ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯಾವ ಐಟಿ, ಇ.ಟಿ. ಬೇಕಾದರೂ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ಅದರಂತೆಯೇ ಅವರ ಕಾಲದಲ್ಲಾದ ಹಗರಣಗಳು ಸಹ ಪತ್ತೆಯಾಗಿ ಬೆಳಕಿಗೆ ಬರುತ್ತವೆ.

ಇದೇ ಸಂದರ್ಭದಲ್ಲಿ ಡಿನ್ನರ್‌ ಪಾರ್ಟಿ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅವರು ಮೊದಲು ಕಾಂಗ್ರೆಸ್‌ ಬಗ್ಗೆ ಮಾತನಾಡುವುದನ್ನು ಬಿಟ್ಟು, ಅವರ ಪಕ್ಷದಲ್ಲಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ಗಮನಹರಿಸಬೇಕು. ಅವರೇ ಅಧಿಕೃತವಾಗಿ ಫೆಬ್ರವರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗುತ್ತಾರೆ ಎಂದಿದ್ದಾರೆ. ಅಲ್ಲದೇ ಆ ಪಕ್ಷದಲ್ಲಿಯೇ ಯಾರ ನೇತೃತ್ವದಲ್ಲಿ ಪಕ್ಷವನ್ನು ಹಾಳು ಮಾಡಬೇಕೆಂದು ತಯಾರಿ ನಡೆಸುತ್ತಿದ್ದಾರೆ. ಆದರೆ ನಮ್ಮ ಪಕ್ಷದಲ್ಲಿ ಇಂತಹ ಯಾವುದೇ ಆಲೋಚನೆಗಳಾಗಲಿ ಅಥವಾ ಗೊಂದಲಗಳಾಗಲಿ ಇಲ್ಲ ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

5 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

5 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

6 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

6 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

6 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

6 hours ago