ರಾಜ್ಯ

ಸಿಎಂ, ಡಿಸಿಎಂ ಹೇಳಿರುವುದನ್ನೇ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿರುವುದನ್ನೇ ನಿನ್ನೆ ಎಐಸಿಸಿ ಅಧ್ಯಕ್ಷರು ಪುನರ್‌ ಉಚ್ಚಾರಿಸಿದ್ದಾರೆ ಅಷ್ಟೇ. ಯಾರ ಬಾಯಿಗೂ ಹಾಕಲು ಸಾಧ್ಯವಿಲ್ಲ ಎಂದು ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಜನವರಿ.18) ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹಿಂದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಸರ್ಕಾರದಲ್ಲಿ ಎಲ್ಲರೂ ಬಹಿರಂಗ ಹೇಳಿಕೆ ನೀಡದೇ ಪಕ್ಷ ಮತ್ತು ಸರ್ಕಾರದ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕೆಂದು ಹೇಳಿದ್ದರು. ನಿನ್ನೆ ಅದನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ ಅಷ್ಟೇ. ನಾವು ಹೇಳಿಕೆಗಳನ್ನು ನೀಡುವಾಗ ವಿವೇಚನೆ ಬಳಸಿ ಹೇಳಿಕೆಗಳನ್ನು ನೀಡಬೇಕು. ಬಹಿರಂಗ ಮಾತಿನಿಂದ ಪಕ್ಷಕ್ಕೆ ಹಾನಿ ಆಗುತ್ತೊ ಅಥವಾ ಇಲ್ಲವಾ ಎಂಬುದನ್ನು ಯೋಚಿಸಬೇಕು. ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆಯಂತೆ ಅವರವರ ಮಾತಿನ ಸೂಕ್ಷ್ಮತೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದರು.

ಪಕ್ಷದಲ್ಲಿ ಅಧಿಕಾರ ಸಿಕ್ಕ ಮೇಲೆ ಕಾಂಗ್ರೆಸ್‌ ಪಕ್ಷ ಯಾವುದು? ಎಐಸಿಸಿ ಅಧ್ಯಕ್ಷರು ಯಾರು? ರಾಹುಲ್‌ ಗಾಂಧಿ ಯಾರು? ಅಥವಾ ಹೈಕಮಾಂಡ್‌ ಏನು ಮಾಡುತ್ತೇ ಎನ್ನುವುದು ಸರಿಯಲ್ಲ. ಈಗಾಗಲೇ ಸಿಎಂ, ಡಿಸಿಎಂ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂದೇಶ ನೀಡಿದ್ದಾರೆ. ಆ ಸೂಚನೆ ಮೇರೆಗೆ ನಾವು ಕೆಲಸ ಮಾಡಬೇಕು ಎಂದು ಹೇಳಿದರು.

ಮುಡಾ ಹಗರಣದಲ್ಲಿ ಬಿಜೆಪಿಯವರು ಆಳಕ್ಕೆ ಹೋದಷ್ಟೂ ಅವರಿಗೆ ಅವಮಾನ

ಮುಡಾ ಹಗರಣದ ಬಗ್ಗೆ ಇ.ಡಿ.ನೀಡಿರುವ ವರದಿ ಆಧಾರಿಸಿ ಬಿಜೆಪಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಕಳೆದ 10-15 ವರ್ಷಗಳಿಂದ ಎಲ್ಲಾ ಹರ್ಬನ್‌ ಡೆವಲಪ್‌ಮೆಂಟ್‌ಗಳಲ್ಲೂ ಐಟಿ ಮತ್ತು ಇ.ಡಿ. ಅವರಿಗೆ ತನಿಖೆ ಮಾಡಿ ಎಂದೇ ಹೇಳುತ್ತಿದ್ದೇವೆ. ಆದರೆ ಬಿಜೆಪಿಯವರು ಮುಡಾ ಹಗರಣದಲ್ಲಿ, ಕಿಯಾನಿಕ್ಸ್ ಸೇರಿದಂತೆ ಬೇರೆ ಯಾವ ಪ್ರಕರಣದಲ್ಲೂ ಆಳಕ್ಕೆ ಹೋದಷ್ಟು ಅವರೇ ಅವಮಾನ ಅನುಭವಿಸುತ್ತಾರೆ. ಅಲ್ಲದೇ ಅವರೇ ಮೂಗು ಕೂಯ್ದೂಕೊಳ್ಳುತ್ತಾರೆ. ಮೊನ್ನೆ ಕಿಯಾನಿಕ್ಸ್‌ ಹಗರಣದಲ್ಲಿ ಏನಾಯ್ತು? ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಯಾವ ಐಟಿ, ಇ.ಟಿ. ಬೇಕಾದರೂ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ಅದರಂತೆಯೇ ಅವರ ಕಾಲದಲ್ಲಾದ ಹಗರಣಗಳು ಸಹ ಪತ್ತೆಯಾಗಿ ಬೆಳಕಿಗೆ ಬರುತ್ತವೆ.

ಇದೇ ಸಂದರ್ಭದಲ್ಲಿ ಡಿನ್ನರ್‌ ಪಾರ್ಟಿ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅವರು ಮೊದಲು ಕಾಂಗ್ರೆಸ್‌ ಬಗ್ಗೆ ಮಾತನಾಡುವುದನ್ನು ಬಿಟ್ಟು, ಅವರ ಪಕ್ಷದಲ್ಲಿ ನಡೆಯುತ್ತಿರುವ ಗೊಂದಲಗಳ ಬಗ್ಗೆ ಗಮನಹರಿಸಬೇಕು. ಅವರೇ ಅಧಿಕೃತವಾಗಿ ಫೆಬ್ರವರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗುತ್ತಾರೆ ಎಂದಿದ್ದಾರೆ. ಅಲ್ಲದೇ ಆ ಪಕ್ಷದಲ್ಲಿಯೇ ಯಾರ ನೇತೃತ್ವದಲ್ಲಿ ಪಕ್ಷವನ್ನು ಹಾಳು ಮಾಡಬೇಕೆಂದು ತಯಾರಿ ನಡೆಸುತ್ತಿದ್ದಾರೆ. ಆದರೆ ನಮ್ಮ ಪಕ್ಷದಲ್ಲಿ ಇಂತಹ ಯಾವುದೇ ಆಲೋಚನೆಗಳಾಗಲಿ ಅಥವಾ ಗೊಂದಲಗಳಾಗಲಿ ಇಲ್ಲ ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

2 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

2 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

3 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

4 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

5 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

5 hours ago