ರಾಜ್ಯ

ಮಾರ್ಚ್‌.10ರೊಳಗೆ ಗ್ರಾ.ಪಂ.ಗಳು ಜನಸ್ನೇಹಿ ಬಜೆಟ್‌ ಮಂಡಿಸಬೇಕು: ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಬಜೆಟ್‌ ತಯಾರಿಸಿ ಮಾರ್ಚ್‌.10ರೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಗ್ರಾಮ ಪಂಚಾಯಿತಿಗಳು ತಮ್ಮ ಆಯವ್ಯಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಸೂಚಿಸಬೇಕು ಎಂದು ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?

ದೇಶದ ಸಂವಿಧಾನದ ಆಶಯದಂತೆ ಗ್ರಾಮ ಪಂಚಾಯಿತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದಾಗಿದೆ. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ವಿಶೇಷವಾದ ಮಹತ್ವವಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಪಂಚಾಯಿತಿಗಳು ಸ್ಥಳೀಯವಾಗಿ ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಮತ್ತು ದೈನಂದಿನ ಸೇವೆಗಳನ್ನು ನೀಡಲು ಅವರೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇನ್ನು ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಚಾರವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಬಜೆಟ್‌ ಸಿದ್ಧಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಪಂಚಾಯಿತಿಗಳು ಮತ್ತಷ್ಟು ಉತ್ತರದಾಯಿಯಾಗಿ ಕಾರ್ಯ ನಿರ್ವಹಿಸಬೇಕು ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

2 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

6 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

6 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

6 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

6 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

6 hours ago