ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಬಜೆಟ್ ತಯಾರಿಸಿ ಮಾರ್ಚ್.10ರೊಳಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯಿತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ ಗ್ರಾಮ ಪಂಚಾಯಿತಿಗಳು ತಮ್ಮ ಆಯವ್ಯಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಸೂಚಿಸಬೇಕು ಎಂದು ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?
ದೇಶದ ಸಂವಿಧಾನದ ಆಶಯದಂತೆ ಗ್ರಾಮ ಪಂಚಾಯಿತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ ನಿರ್ವಹಿಸಬೇಕೆಂಬುದಾಗಿದೆ. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ವಿಶೇಷವಾದ ಮಹತ್ವವಿದೆ. ಈ ಆಶಯಕ್ಕೆ ಅನುಗುಣವಾಗಿ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಪಂಚಾಯಿತಿಗಳು ಸ್ಥಳೀಯವಾಗಿ ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಲು ಮತ್ತು ದೈನಂದಿನ ಸೇವೆಗಳನ್ನು ನೀಡಲು ಅವರೇ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಕಾಯ್ದೆಯ ಆಶಯದಂತೆ ಕಡ್ಡಾಯವಾಗಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಈ ವಿಚಾರವನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ನಿಯಮಾನುಸಾರ ಬಜೆಟ್ ಸಿದ್ಧಪಡಿಸಿ ಅನುಮೋದನೆ ಪಡೆದು ವೆಚ್ಚ ಭರಿಸುವ ಮೂಲಕ ಪಂಚಾಯಿತಿಗಳು ಮತ್ತಷ್ಟು ಉತ್ತರದಾಯಿಯಾಗಿ ಕಾರ್ಯ ನಿರ್ವಹಿಸಬೇಕು ಎಂದಿದ್ದಾರೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…