R Ashok steps down as Opposition Leader even before Dussehra
ಕಲಬುರ್ಗಿ: ಬೆಂಗಳೂರು ಕಾಲ್ತುಳಿತ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸರ್ಕಾರದ ಲೋಪದೋಷವಾಗಿದ್ದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರತೆಯ ದೃಷ್ಟಿಯಿಂದ ಸರ್ಕಾರ ವಿಕ್ಟರಿ ಪೆರೇಡ್ಗೆ ನಿರಾಕರಣೆ ಮಾಡಿತ್ತು. ಆದರೆ, ಬಿಜೆಪಿಯವರು ಇದಕ್ಕೆ ತಕರಾರು ತೆಗೆದು ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದ್ದಾರೆ. ಈಗ ಘಟನೆ ನಡೆದು ಹೋಗಿದೆ. ಎಲ್ಲದರಲ್ಲೂ ರಾಜಕೀಯ ಮಾಡಬಾರದು, ಇದು ಸಮಯವಲ್ಲ. ಸರ್ಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ. ಸಾವಿಗೀಡಾದವರ ಮನೆಯವರಿಗೆ ಸಾಂತ್ವನ ಹೇಳಿದೆ. ಪರಿಹಾರ ಕೂಡಾ ಘೋಷಿಸಿದೆ. ಘಟನೆ ಕುರಿತಂತೆ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ. ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದರು.
ಗೃಹ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲ ಘಟನೆಗಳಿಗೂ ಒಂದೇ ಮಾನದಂಡ ಅನ್ವಯ ಆಗಬೇಕು. ಪಹಲ್ಗಾಮ್ನಲ್ಲಿ ಉಗ್ರರು ಜನರನ್ನು ಹತ್ಯೆ ಮಾಡಿ ಹೋಗಿದ್ದಾರೆ. ಅವರು ಎಲ್ಲಿ ಹೋಗಿದ್ದಾರೆ. ಭಾರತದ ಒಳಗೆ ಇದ್ದಾರ ಅಥವಾ ಪಾಕಿಸ್ತಾನಕ್ಕೆ ಹೋಗಿದ್ದಾರ ಎನ್ನುವ ಮಾಹಿತಿ ಇಲ್ಲ. ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರ, ವಿದೇಶಾಂಗ ಸಚಿವರ ರಾಜೀನಾಮೆಗೆ ಯಾರಾದರೂ ಒತ್ತಾಯಿಸಿದ್ದಾರೆಯೇ? ಎಂದು ಪ್ರಶ್ನಿಸಿದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…