ರಾಜ್ಯ

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರೆತಿದೆ. ಅಲ್ಲದೇ ಕಲಬುರ್ಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ ಹೊಂದಿದೆ. ಇತ್ತೀಚಿಗೆ ಬೆಳಗಾವಿಯ ಅಧಿವೇಶನದಲ್ಲಿ‌ ಕೆಲ ಶಾಸಕರು ಈ ಬಗ್ಗೆ ಪ್ರಸ್ತಾಪ ಮಾಡಿ ನಕರಾತ್ಮಕ‌ ಹೇಳಿದ್ದರು. ಆದರೆ ಇದೀಗ ಆ ಎಲ್ಲಾ ಲೋಪಗಳನ್ನು ಸರಿಪಡಿಸಿಕೊಂಡು‌,‌ ಈ ಭಾಗದ ಜನರಿಗೆ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಜಯದೇವ ಆಸ್ಪತ್ರೆಯಿಂದ 15 ಲಕ್ಷ ಮಂದಿಗೆ ಚಿಕಿತ್ಸೆ

ಜಯದೇವ ಆಸ್ಪತ್ರೆ 2016 ರಲ್ಲಿ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಸುಮಾರು 15 ಲಕ್ಷ ಜನರು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಆರೋಗ್ಯ ಸೇವೆ ಪಡೆದುಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಜೊತೆಗೆ ಸಂವಿಧಾನದ ವಿಧಿ 371 (ಜೆ) ಜಾರಿಗೆ ಬಂದು ಒಂದು ದಶಕಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಹೊಸ ಕಟ್ಟಡ‌ ನಿರ್ಮಾಣ‌ ಮಾಡಿ, 371 ಹಾಸಿಗೆಗಳನ್ನು ನೀಡಿ ಆಸ್ಪತ್ರೆಯನ್ನಾಗಿ‌ ಪರಿವರ್ತಿಸಲಾಗಿದೆ. ಅದು ಮುಂದಿನ ದಿನಗಳಲ್ಲಿ ಸಿಎಂ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನು, ವಿರೋಧದ ಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಅವರ ಬಾಣಂತಿಯರ ಸಾವುಗಳು ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ಬೇಜಾವಾಬ್ದಾರಿತನ ಹಾಗೂ ಹಣಗಳಿಸುವ ದುರಾಸೆತನದ ಪರಿಣಾಮವಾಗಿ ರಾಜ್ಯದ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ಬಿಜೆಪಿ ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನಬಹುದು ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ಕುರಿತು ಮಾತನಾಡಿದ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ‌ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಸ್ವತ: ಅವರ ಮಡದಿಯೂ ಒಪ್ಪುವುದಿಲ್ಲ. ಮಹಿಳೆಯರ ಬಗ್ಗೆ ಬಿಜೆಪಿಯವರು ಅವಹೇಳನಕಾರಿ ಮಾತನಾಡುತ್ತಾರೆ. ಅದು ಅವರ ಸಂಸ್ಕೃತಿ. ಆದರೂ ಕೂಡಾ ಬಿಜೆಪಿ ನಾಯಕರ ಅವರ ಪ್ರಕಾರ, ಶಾಸಕ ಮುನಿರತ್ನ,‌ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿ.ಟಿ. ರವಿ ಅವರ ಯಾವುದೇ ತಪ್ಪು ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

1 hour ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

1 hour ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

3 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago