ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಇಂದು(ಡಿಸೆಂಬರ್.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರೆತಿದೆ. ಅಲ್ಲದೇ ಕಲಬುರ್ಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ ಹೊಂದಿದೆ. ಇತ್ತೀಚಿಗೆ ಬೆಳಗಾವಿಯ ಅಧಿವೇಶನದಲ್ಲಿ ಕೆಲ ಶಾಸಕರು ಈ ಬಗ್ಗೆ ಪ್ರಸ್ತಾಪ ಮಾಡಿ ನಕರಾತ್ಮಕ ಹೇಳಿದ್ದರು. ಆದರೆ ಇದೀಗ ಆ ಎಲ್ಲಾ ಲೋಪಗಳನ್ನು ಸರಿಪಡಿಸಿಕೊಂಡು, ಈ ಭಾಗದ ಜನರಿಗೆ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.
ಜಯದೇವ ಆಸ್ಪತ್ರೆಯಿಂದ 15 ಲಕ್ಷ ಮಂದಿಗೆ ಚಿಕಿತ್ಸೆ
ಜಯದೇವ ಆಸ್ಪತ್ರೆ 2016 ರಲ್ಲಿ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಸುಮಾರು 15 ಲಕ್ಷ ಜನರು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಆರೋಗ್ಯ ಸೇವೆ ಪಡೆದುಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಜೊತೆಗೆ ಸಂವಿಧಾನದ ವಿಧಿ 371 (ಜೆ) ಜಾರಿಗೆ ಬಂದು ಒಂದು ದಶಕಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣ ಮಾಡಿ, 371 ಹಾಸಿಗೆಗಳನ್ನು ನೀಡಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಅದು ಮುಂದಿನ ದಿನಗಳಲ್ಲಿ ಸಿಎಂ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದ್ದಾರೆ.
ಇನ್ನು, ವಿರೋಧದ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರ ಬಾಣಂತಿಯರ ಸಾವುಗಳು ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ಬೇಜಾವಾಬ್ದಾರಿತನ ಹಾಗೂ ಹಣಗಳಿಸುವ ದುರಾಸೆತನದ ಪರಿಣಾಮವಾಗಿ ರಾಜ್ಯದ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ಬಿಜೆಪಿ ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನಬಹುದು ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ಕುರಿತು ಮಾತನಾಡಿದ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಸ್ವತ: ಅವರ ಮಡದಿಯೂ ಒಪ್ಪುವುದಿಲ್ಲ. ಮಹಿಳೆಯರ ಬಗ್ಗೆ ಬಿಜೆಪಿಯವರು ಅವಹೇಳನಕಾರಿ ಮಾತನಾಡುತ್ತಾರೆ. ಅದು ಅವರ ಸಂಸ್ಕೃತಿ. ಆದರೂ ಕೂಡಾ ಬಿಜೆಪಿ ನಾಯಕರ ಅವರ ಪ್ರಕಾರ, ಶಾಸಕ ಮುನಿರತ್ನ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಿ.ಟಿ. ರವಿ ಅವರ ಯಾವುದೇ ತಪ್ಪು ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಹೊಸದಿಲ್ಲಿ : ಕಳೆದ ಡಿಸೆಂಬರ್ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…
ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…
ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…