ರಾಜ್ಯ

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ದಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ಮೇಲೆ ಲಕ್ಷಾಂತರ ಜನ ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರೆತಿದೆ. ಅಲ್ಲದೇ ಕಲಬುರ್ಗಿ ಮೆಡಿಕಲ್ ಹಬ್ ಆಗಿ ಅಭಿವೃದ್ದಿ ಹೊಂದಿದೆ. ಇತ್ತೀಚಿಗೆ ಬೆಳಗಾವಿಯ ಅಧಿವೇಶನದಲ್ಲಿ‌ ಕೆಲ ಶಾಸಕರು ಈ ಬಗ್ಗೆ ಪ್ರಸ್ತಾಪ ಮಾಡಿ ನಕರಾತ್ಮಕ‌ ಹೇಳಿದ್ದರು. ಆದರೆ ಇದೀಗ ಆ ಎಲ್ಲಾ ಲೋಪಗಳನ್ನು ಸರಿಪಡಿಸಿಕೊಂಡು‌,‌ ಈ ಭಾಗದ ಜನರಿಗೆ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಜಯದೇವ ಆಸ್ಪತ್ರೆಯಿಂದ 15 ಲಕ್ಷ ಮಂದಿಗೆ ಚಿಕಿತ್ಸೆ

ಜಯದೇವ ಆಸ್ಪತ್ರೆ 2016 ರಲ್ಲಿ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ಸುಮಾರು 15 ಲಕ್ಷ ಜನರು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಆರೋಗ್ಯ ಸೇವೆ ಪಡೆದುಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಜೊತೆಗೆ ಸಂವಿಧಾನದ ವಿಧಿ 371 (ಜೆ) ಜಾರಿಗೆ ಬಂದು ಒಂದು ದಶಕಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ಹೊಸ ಕಟ್ಟಡ‌ ನಿರ್ಮಾಣ‌ ಮಾಡಿ, 371 ಹಾಸಿಗೆಗಳನ್ನು ನೀಡಿ ಆಸ್ಪತ್ರೆಯನ್ನಾಗಿ‌ ಪರಿವರ್ತಿಸಲಾಗಿದೆ. ಅದು ಮುಂದಿನ ದಿನಗಳಲ್ಲಿ ಸಿಎಂ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಇನ್ನು, ವಿರೋಧದ ಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಅವರ ಬಾಣಂತಿಯರ ಸಾವುಗಳು ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದ ಬೇಜಾವಾಬ್ದಾರಿತನ ಹಾಗೂ ಹಣಗಳಿಸುವ ದುರಾಸೆತನದ ಪರಿಣಾಮವಾಗಿ ರಾಜ್ಯದ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ಬಿಜೆಪಿ ಸರ್ಕಾರದ ಪ್ರಾಯೋಜಿತ ಕೊಲೆಗಳು ಎನ್ನಬಹುದು ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುರಿತು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ಕುರಿತು ಮಾತನಾಡಿದ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ‌ ಬಿಜೆಪಿ ವಿಧಾನ ಪರಿಷತ್‌ ಶಾಸಕ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಸ್ವತ: ಅವರ ಮಡದಿಯೂ ಒಪ್ಪುವುದಿಲ್ಲ. ಮಹಿಳೆಯರ ಬಗ್ಗೆ ಬಿಜೆಪಿಯವರು ಅವಹೇಳನಕಾರಿ ಮಾತನಾಡುತ್ತಾರೆ. ಅದು ಅವರ ಸಂಸ್ಕೃತಿ. ಆದರೂ ಕೂಡಾ ಬಿಜೆಪಿ ನಾಯಕರ ಅವರ ಪ್ರಕಾರ, ಶಾಸಕ ಮುನಿರತ್ನ,‌ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಿ.ಟಿ. ರವಿ ಅವರ ಯಾವುದೇ ತಪ್ಪು ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

12 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago