ರಾಜ್ಯ

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ ಹೊರಡಿಸಬೇಕು. ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನು ಓದಿ: ಆರ್‌ಎಸ್‌ಎಸ್‌ನಿಂದ ರಾಜ್ಯದಲ್ಲಿ ಯಾವ ಅನಾಹುತ ಆಗಿದೆ: ಎಂಎಲ್‌ಸಿ ವಿಶ್ವನಾಥ್‌ ಪ್ರಶ್ನೆ

ಸ್ಪಷ್ಟ ನಿರ್ದೇಶನ ಇದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಆರ್‌ಎಸ್‌ಎಸ್‌ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದ್ದರಿದ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು.

ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಸುತ್ತೋಲೆಯನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

32 mins ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

34 mins ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

37 mins ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

39 mins ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

14 hours ago