ಸೇಡಂ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣವು ದೇಶದಲ್ಲಿಯೇ ಸುದ್ದಿಯಲ್ಲಿದ್ದು, ಇಂದು (ಏ.29) ಕಲಬುರಗಿಯ ಸೇಡಂನಲ್ಲಿ ನಡೆದ ಕಾಂಗ್ರೆಸ್ ಚುನಾವಣ ಪ್ರಚಾರದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರಜ್ವಲ್ ಹೆಸರೇಳದೆ ಕಿಡಿಕಾರಿದ್ದಾರೆ.
ರಾಜ್ಯದ ಸಂಸದ ಮಹಿಳೆಯರ ಮೇಲೆ ರಾಕ್ಷಸ ರೀತಿಯ ಕೃತ್ಯ ವೆಸಗಿದ್ದಾರೆ. ಇದು ಇಡೀ ನಾಗರಿಕರೇ ತಲೆ ತಗ್ಗಿಸುವ ವಿಚಾರವಾಗಿದೆ. ಮೋದಿ ಜತೆ ಇರುವ ವ್ಯಕ್ತಿ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅದೆ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಉತ್ತರಿಸಿಲಿ, ಅಂತಹರ ಪರ ಪ್ರಧಾನಿ ಮೋದಿ ಮತ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗಲೂ ಮೋದಿಸುಮ್ಮನೆ ಇದ್ದರು. ಈಗಲೂ ಸುಮ್ಮನೇ ಇದ್ದಾರೆ. ಇದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ ಪರಾರಿಯಾದ. ಆ ರಾಕ್ಷಸ ದೇಶ ಬಿಟ್ಟು ಹೋಗುವಾಗ ನಿಮಗೆ ಗೊತ್ತಾಗಲಿಲ್ಲವೇ? ಮಂಗಲ ಸೂತ್ರದ ಬಗ್ಗೆ ಮಾತನಾಡುವ ಮೋದಿ ಈಗ ಏನು ಹೇಳುತ್ತಾರೆ? ಮೋದಿ ಅವರು ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ ಹೇಳಲಿ ಎಂದು ಸವಾಲು ಎಸೆದರು.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…