ಸೇಡಂ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣವು ದೇಶದಲ್ಲಿಯೇ ಸುದ್ದಿಯಲ್ಲಿದ್ದು, ಇಂದು (ಏ.29) ಕಲಬುರಗಿಯ ಸೇಡಂನಲ್ಲಿ ನಡೆದ ಕಾಂಗ್ರೆಸ್ ಚುನಾವಣ ಪ್ರಚಾರದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಪ್ರಜ್ವಲ್ ಹೆಸರೇಳದೆ ಕಿಡಿಕಾರಿದ್ದಾರೆ.
ರಾಜ್ಯದ ಸಂಸದ ಮಹಿಳೆಯರ ಮೇಲೆ ರಾಕ್ಷಸ ರೀತಿಯ ಕೃತ್ಯ ವೆಸಗಿದ್ದಾರೆ. ಇದು ಇಡೀ ನಾಗರಿಕರೇ ತಲೆ ತಗ್ಗಿಸುವ ವಿಚಾರವಾಗಿದೆ. ಮೋದಿ ಜತೆ ಇರುವ ವ್ಯಕ್ತಿ ಇಂದು ಕರ್ನಾಟಕದಲ್ಲಿ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಅದೆ ವ್ಯಕ್ತಿಯ ಪರ ಮತಯಾಚಿಸಿದ್ದ ಮೋದಿ ಹಾಗೂ ಅಮಿತ್ ಶಾ ಉತ್ತರಿಸಿಲಿ, ಅಂತಹರ ಪರ ಪ್ರಧಾನಿ ಮೋದಿ ಮತ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗಲೂ ಮೋದಿಸುಮ್ಮನೆ ಇದ್ದರು. ಈಗಲೂ ಸುಮ್ಮನೇ ಇದ್ದಾರೆ. ಇದೇ ವ್ಯಕ್ತಿ ಯಾರಿಗೂ ಗೊತ್ತಾಗದಂತೆ ವಿದೇಶಕ್ಕೆ ಪರಾರಿಯಾದ. ಆ ರಾಕ್ಷಸ ದೇಶ ಬಿಟ್ಟು ಹೋಗುವಾಗ ನಿಮಗೆ ಗೊತ್ತಾಗಲಿಲ್ಲವೇ? ಮಂಗಲ ಸೂತ್ರದ ಬಗ್ಗೆ ಮಾತನಾಡುವ ಮೋದಿ ಈಗ ಏನು ಹೇಳುತ್ತಾರೆ? ಮೋದಿ ಅವರು ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ ಹೇಳಲಿ ಎಂದು ಸವಾಲು ಎಸೆದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…