ಬೆಂಗಳೂರು : ಬಿಜೆಪಿ ನಾಯಕರಿಲ್ಲದ ಪಕ್ಷ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೊದಲು ನಿಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ನಾಯಕರ ಪಕ್ಷವಲ್ಲ. ನಮ್ಮದು ಕಾರ್ಯಕರ್ತ ಆಧಾರಿತ ಸಂಘಟನೆ. ಘಟಾನುಘಟಿ ನಾಯಕರು ಇರುವ ಕಾಂಗ್ರೆಸ್ ಪರಿಸ್ಥಿತಿ ದೇಶದಲ್ಲಿ ಏನಾಗಿದೆ ಎಂದು ಜಗತ್ತಿಗೆ ಗೊತ್ತು ಎಂದು ಪ್ರಹಾರ ನಡೆಸಿದರು.
ಪ್ರಿಯಾಂಕ ಖರ್ಗೆ ಮಾತಿಗೆ ಹೆಚ್ಚಿನ ಮನ್ನಣೆ ನೀಡಬೇಕಾದ ಅಗತ್ಯವಿಲ್ಲ. ಏಕೆಂದರೆ ಅವರ ಮಾತನ್ನು ಕಾಂಗ್ರೆಸ್ ಪಕ್ಷದಲ್ಲಿ ಕೇಳುವವರು ಇಲ್ಲ. ಪ್ರಚಾರಕ್ಕಾಗಿ ದಿನ ಮಾತನಾಡಿದರೆ ಅದಕ್ಕೆ ಅರ್ಥವೂ ಇರುವುದಿಲ್ಲ. ಬೆಲೆಯೂ ಇರುವುದಿಲ್ಲ ಎಂದು ಹೇಳಿದರು.
ಕೆಲವು ಸಂದರ್ಭಗಳಲ್ಲಿ ಅರ್ಹತೆ ಇಲ್ಲದಿದ್ದರೂ ರಾಜಕೀಯ ಪಕ್ಷಗಳಿಗೆ ಜನಾದೇಶ ಸಿಗುತ್ತದೆ. ಪ್ರಸ್ತುತ ಕರ್ನಾಟಕದಲ್ಲೂ ಅಂಥದೇ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಈಗ ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಎಂದರು.
ಕುರ್ಚಿ ಕಿತ್ತಾಟ ನಡೆದೆ ಕಾಂಗ್ರೆಸ್ ಅವಸಾನವಾಗಲಿದೆ . ಈ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಅಸ್ಥಿರಗೊಳಿಸುವ ಅಗತ್ಯವಿಲ್ಲ. ಒಳಜಗಳದಿಂದಲೇ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…