ರಾಜ್ಯ

ಪ್ರಿಯಾಂಕ ಖರ್ಗೆ ಮಾತಿಗೆ ಹೆಚ್ಚಿನ ಮನ್ನಣೆ ನೀಡಬೇಕಾದ ಅಗತ್ಯವಿಲ್ಲ: ಅಶ್ವಥ್ ನಾರಾಯಣ್‌ ತಿರುಗೇಟು

ಬೆಂಗಳೂರು : ಬಿಜೆಪಿ ನಾಯಕರಿಲ್ಲದ ಪಕ್ಷ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮೊದಲು ನಿಮ್ಮ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ನಾಯಕರ ಪಕ್ಷವಲ್ಲ. ನಮ್ಮದು ಕಾರ್ಯಕರ್ತ ಆಧಾರಿತ ಸಂಘಟನೆ. ಘಟಾನುಘಟಿ ನಾಯಕರು ಇರುವ ಕಾಂಗ್ರೆಸ್ ಪರಿಸ್ಥಿತಿ ದೇಶದಲ್ಲಿ ಏನಾಗಿದೆ ಎಂದು ಜಗತ್ತಿಗೆ ಗೊತ್ತು ಎಂದು ಪ್ರಹಾರ ನಡೆಸಿದರು.

ಪ್ರಿಯಾಂಕ ಖರ್ಗೆ ಮಾತಿಗೆ ಹೆಚ್ಚಿನ ಮನ್ನಣೆ ನೀಡಬೇಕಾದ ಅಗತ್ಯವಿಲ್ಲ. ಏಕೆಂದರೆ ಅವರ ಮಾತನ್ನು ಕಾಂಗ್ರೆಸ್ ಪಕ್ಷದಲ್ಲಿ ಕೇಳುವವರು ಇಲ್ಲ. ಪ್ರಚಾರಕ್ಕಾಗಿ ದಿನ ಮಾತನಾಡಿದರೆ ಅದಕ್ಕೆ ಅರ್ಥವೂ ಇರುವುದಿಲ್ಲ. ಬೆಲೆಯೂ ಇರುವುದಿಲ್ಲ ಎಂದು ಹೇಳಿದರು.

ಕೆಲವು ಸಂದರ್ಭಗಳಲ್ಲಿ ಅರ್ಹತೆ ಇಲ್ಲದಿದ್ದರೂ ರಾಜಕೀಯ ಪಕ್ಷಗಳಿಗೆ ಜನಾದೇಶ ಸಿಗುತ್ತದೆ. ಪ್ರಸ್ತುತ ಕರ್ನಾಟಕದಲ್ಲೂ ಅಂಥದೇ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಈಗ ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಎಂದರು.

ಕುರ್ಚಿ ಕಿತ್ತಾಟ ನಡೆದೆ ಕಾಂಗ್ರೆಸ್ ಅವಸಾನವಾಗಲಿದೆ . ಈ ಸರ್ಕಾರವನ್ನು ಆಪರೇಷನ್ ಕಮಲದ ಮೂಲಕ ಅಸ್ಥಿರಗೊಳಿಸುವ ಅಗತ್ಯವಿಲ್ಲ. ಒಳಜಗಳದಿಂದಲೇ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.

andolanait

Recent Posts

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 mins ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 mins ago

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

24 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

24 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

24 hours ago