ಬೆಂಗಳೂರು: ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಿವಾಣ ಹಾಕಲು ಶೀಘ್ರವೇ ರಾಜ್ಯದಲ್ಲಿ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.9) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಅಪ್ ಗಳಿಗೆ ಕಡಿವಾಣ ಹಾಕಲು ಈಗಾಗಲೇ ಹೊಸ ಕಾನೂನು ತರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಅಪ್ಗಳಿಂದ ರಾಜ್ಯದ ಜನತೆಯನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುವುದರ ಬಗ್ಗೆ ಸಭೆಯನ್ನು ನಡೆಸಿದ್ದೇವೆ ಎಂದರು.
ಇನ್ನೂ ಗೇಮಿಂಗ್ ಅಪ್ಗಳಿಗೆ ಕಡಿವಾಣ ಹಾಕಲು ನಮ್ಮ ಸರ್ಕಾರಕ್ಕೆ ಕಷ್ಟದ ಕೆಲಸವಾಗಿದೆ. ಏಕೆಂದರೆ ಈ ಅಪ್ಗಳು ನಮ್ಮ ದೇಶದ ಗೇಮಿಂಗ್ ಅಪ್ಗಳಷ್ಟೇ ಅಲ್ಲ, ನೆರೆ-ಹೊರೆಯ ದೇಶದ ಗೇಮಿಂಗ್ ಅಪ್ಗಳು ಸಹ ಇವೆ. ಹೀಗಾಗಿ ಮೊದಲು ಕಾನೂನು ಬಾಹಿರವಾಗಿರುವುದನ್ನು ನಿಷೇಧ ಮಾಡಬೇಕು. ಬಳಿಕ ಕಾನೂನು ಪ್ರಕಾರವವಿರುವ ಅಪ್ಗಳನ್ನು ಹೇಗೆ ನಿಯಂತ್ರಣ ಮಾಡಬೇಕು ಎಂಬುದರ ಬಗ್ಗೆ ಚರ್ಚೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…