ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದೆ.
ಈ ವಿಚಾರವಾಗಿ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಮಸೂದೆಯ ಷರತ್ತುಗಳ ಬಗ್ಗೆ ಉದ್ಯಮ ತಜ್ಞರು ಮತ್ತು ಇತರ ಇಲಾಖೆಗಳ ಬಳಿ ಸಮಾಲೋಚನೆ ನಡೆಸಿ ನಂತರವೇ ಅದನ್ನ ಜಾರಿಗೊಳಿಸುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಅಲ್ಲದೆ ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಈ ಮಸೂದೆಯೂ ಕಾರ್ಮಿಕ ಇಲಾಖೆಯ ಸಲಹೆಯಾಗಿದೆ. ಈ ಬಗ್ಗೆ ಕೈಗಾರಿಕೆ ಅಥವಾ ಮಾಹಿತಿ ತಂತ್ರಜ್ಞಾನ ಇಲಾಖೆಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ನಾವು ಸುದೀರ್ಘವಾದ ಸಮಾಲೋಚನೆಗಳನ್ನ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯ ನಿವಾಸಿಗಳಿಗೆ ಉದ್ಯೋಗಗಳನ್ನು ಒದಗಿಸುವುದು ಮತ್ತು ಜೊತೆ ಜೊತೆಗೆ ಹೂಡಿಕೆಗಳನ್ನ ಆಕರ್ಷಿಸುವುದು ರಾಜ್ಯ ಸರ್ಕಾರದ ಗುರಿ ಎಂದು ತಿಳಿಸಿದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…