ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದೆ.
ಈ ವಿಚಾರವಾಗಿ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಮಸೂದೆಯ ಷರತ್ತುಗಳ ಬಗ್ಗೆ ಉದ್ಯಮ ತಜ್ಞರು ಮತ್ತು ಇತರ ಇಲಾಖೆಗಳ ಬಳಿ ಸಮಾಲೋಚನೆ ನಡೆಸಿ ನಂತರವೇ ಅದನ್ನ ಜಾರಿಗೊಳಿಸುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಅಲ್ಲದೆ ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಈ ಮಸೂದೆಯೂ ಕಾರ್ಮಿಕ ಇಲಾಖೆಯ ಸಲಹೆಯಾಗಿದೆ. ಈ ಬಗ್ಗೆ ಕೈಗಾರಿಕೆ ಅಥವಾ ಮಾಹಿತಿ ತಂತ್ರಜ್ಞಾನ ಇಲಾಖೆಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ನಾವು ಸುದೀರ್ಘವಾದ ಸಮಾಲೋಚನೆಗಳನ್ನ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯ ನಿವಾಸಿಗಳಿಗೆ ಉದ್ಯೋಗಗಳನ್ನು ಒದಗಿಸುವುದು ಮತ್ತು ಜೊತೆ ಜೊತೆಗೆ ಹೂಡಿಕೆಗಳನ್ನ ಆಕರ್ಷಿಸುವುದು ರಾಜ್ಯ ಸರ್ಕಾರದ ಗುರಿ ಎಂದು ತಿಳಿಸಿದರು.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…