ಬೆಂಗಳೂರು : ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಯನ್ನ ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದ ಬೆನ್ನಲ್ಲೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಲು ಆರಂಭವಾಗಿದೆ. ಈ ಪರ-ವಿರೋಧ ಚರ್ಚೆಗಳ ಬೆನ್ನಲ್ಲೆ ಸರ್ಕಾರ ಹಾಗೂ ಸಚಿವರು ಈ ಬಗ್ಗೆ ಸ್ಪಷ್ಟನೆ ನೀಡಿದೆ.
ಈ ವಿಚಾರವಾಗಿ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು ಮಸೂದೆಯ ಷರತ್ತುಗಳ ಬಗ್ಗೆ ಉದ್ಯಮ ತಜ್ಞರು ಮತ್ತು ಇತರ ಇಲಾಖೆಗಳ ಬಳಿ ಸಮಾಲೋಚನೆ ನಡೆಸಿ ನಂತರವೇ ಅದನ್ನ ಜಾರಿಗೊಳಿಸುವಂತೆ ಸಿಎಂ ಅವರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಅಲ್ಲದೆ ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಈ ಮಸೂದೆಯೂ ಕಾರ್ಮಿಕ ಇಲಾಖೆಯ ಸಲಹೆಯಾಗಿದೆ. ಈ ಬಗ್ಗೆ ಕೈಗಾರಿಕೆ ಅಥವಾ ಮಾಹಿತಿ ತಂತ್ರಜ್ಞಾನ ಇಲಾಖೆಯೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ನಾವು ಸುದೀರ್ಘವಾದ ಸಮಾಲೋಚನೆಗಳನ್ನ ನಡೆಸುತ್ತೇವೆ ಮತ್ತು ಒಮ್ಮತಕ್ಕೆ ಬರಲಿದ್ದೇವೆ. ಸ್ಥಳೀಯ ನಿವಾಸಿಗಳಿಗೆ ಉದ್ಯೋಗಗಳನ್ನು ಒದಗಿಸುವುದು ಮತ್ತು ಜೊತೆ ಜೊತೆಗೆ ಹೂಡಿಕೆಗಳನ್ನ ಆಕರ್ಷಿಸುವುದು ರಾಜ್ಯ ಸರ್ಕಾರದ ಗುರಿ ಎಂದು ತಿಳಿಸಿದರು.
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…
ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…