ರಾಜ್ಯ

ಕಾಂಗ್ರೆಸ್‌ ಭ್ರಷ್ಟರಿಗೆ ರಕ್ಷಣೆ ನೀಡುತ್ತದೆ: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಷಿಕ್ಯೂಷನ್‌ ಹೊರಡಿಸಿರುವ ರಾಜ್ಯಪಾಲರ ವಿರುದ್ಧ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ತಮಗೆ ಹೈ ಕಮಾಂಡ್‌ ಬೆಂಬಲ ನೀಡಿದೆ ಎಂದು ಹೇಳಿದ್ದರು.

ಈ ಹೇಳಿಕೆಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಕಾಂಗ್ರೆಸ್‌ ಭ್ರಷ್ಟರಿಗೆ ರಕ್ಷಣೆ ನೀಡುತ್ತದೆ. ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್‌ ನಿಂತಿರುವುದು ಆಶ್ಚರ್ಯವೇನಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮೊದಲು ವಿಶ್ವದಾದ್ಯಂತ ಕಾಂಗ್ರೆಸ್‌ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಖ್ಯಾತಿ ಗಳಿಸಿತ್ತು. ಇದೇ ಕಾರಣಕ್ಕಾಗಿಯೇ ಇಂದು ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್‌ ನಿಂತಿದೆ ಎಂದರು.

ಮುಡಾ ಹಗರಣ ಸಂಬಂಧ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಷಿಕ್ಯೂಷನ್‌ಗೆ ನೀಡಿರುವ ಸಂಬಂಧ ಸಿದ್ದರಾಮಯ್ಯ ಅವರಿಗೆ ಆತ್ಮ ಸಾಕ್ಷಿಯಿದ್ದರೇ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ, ತಿನಖೆ ವೇಳೆ ನಿರಪರಾಧಿ ಎಂದ ಸಾಭೀತಾದರೇ ಮತ್ತೆ ಸಿಎಂ ಸ್ಥಾನ ಅಲಂಕರಿಸಲಿ ಎಂದು ಟಾಂಗ್‌ ಕೊಟ್ಟರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

4 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

4 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

4 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

4 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

4 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

4 hours ago